ನಿಗೂಢ ಕೊಲೆ ರಹಸ್ಯ ಬಯಲು…ಪ್ರಿಯಕರ ಅಂದರ್…ಅಕ್ರಮ ಸಂಭಂಧ ಹಿನ್ನಲೆ ಕೊಲೆ…ಸಾಲ ಹಿಂದಿರುಗಿಸುವಂತೆ ಒತ್ತಡ ಹೇರಿದ್ದಕ್ಕೆ ಹತ್ಯೆ…

ನಿಗೂಢ ಕೊಲೆ ರಹಸ್ಯ ಬಯಲು…ಪ್ರಿಯಕರ ಅಂದರ್…ಅಕ್ರಮ ಸಂಭಂಧ ಹಿನ್ನಲೆ ಕೊಲೆ…ಸಾಲ ಹಿಂದಿರುಗಿಸುವಂತೆ ಒತ್ತಡ ಹೇರಿದ್ದಕ್ಕೆ ಹತ್ಯೆ…

ನಂಜನಗೂಡು,ಏ18,Tv10 ಕನ್ನಡ
ಮಹಿಳೆಯ ನಿಗೂಢ ಕೊಲೆ ರಹಸ್ಯ ಭೇಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.ಅಕ್ರಮ ಸಂಭಂದ ಇರಿಸಿಕೊಂಡಿದ್ದ ಪ್ರಿಯತಮ ಅಂದರ್ ಆಗಿದ್ದಾನೆ.ಸಾಲವಾಗಿ ಕೊಟ್ಟ ಹಣ ವಾಪಸ್ ಕೇಳಿದ ಪ್ರಿಯತಮೆಯನ್ನ ಪ್ರಿಯಕರ ಬರ್ಭರವಾಗಿ ಕೊಲೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ಮಳವಳ್ಳಿಯ ನಿವಾಸಿ ಶ್ಯಾಂಪ್ರಸಾದ್ ಬಂಧಿತ ಆರೋಪಿ.ಪ್ರಿಯಕರನ ಕೈಲಿ ಹತ್ಯೆಗೊಳಗಾದವಳು ಕನಕಪುರದ ನಿವಾಸಿ ಮಂಜುಳ(40).

ಎರಡು ದಿನಗಳ ಹಿಂದೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಇರುವ ಹದಿನಾರುಕಾಲಿನ ಮಂಟಪದ ಬಳಿ ಅಪರಿಚಿತ ಮಹಿಳೆ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಪೊಲೀಸರು ಮೃತ ಮಹಿಳೆಯ ಮಾಹಿತಿ ಜಾಲಾಡಿದಾಗ ಕನಕಪುರದ ಮಂಜುಳಾ ಎಂದು ತಿಳಿದುಬಂತು.ಮೂಲತಃ ಮಳವಳ್ಳಿ ತಾಲೂಕಿನ ಮಂಜುಳಾ ವಿವಾಹಿತಳು.ಮಹದೇವಾಚಾರಿ ಎಂಬುವರನ್ನ ವಿವಾಹವಾಗಿದ್ದ ಮಂಜುಳಾ ಎರಡು ಮಕ್ಕಳ ತಾಯಿ.ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುಳಾಗೆ ಶ್ಯಾಂಪ್ರಸಾದ್ ಪರಿಚಯವಾಯಿತು.ಸ್ನೇಹ ಪ್ರಣಯಕ್ಕೆ ತಿರುಗಿ ಅಕ್ರಮ ಸಂಭಂಧಕ್ಕೆ ದಾರಿಯಾಯಿತು.ಈ ವಿಚಾರ ಪತಿ ಮಹದೇವಾಚಾರಿಗೆ ತಿಳಿದು ಗಲಾಟೆ ನಡೆದಿದೆ.ಶ್ಯಾಂಪ್ರಸಾದ್ ಸಹವಾಸ ಬಿಡುವಂತೆ ಪತಿ ಮನವಿ ಮಾಡಿದ್ದಾರೆ.3 ಲಕ್ಷ ಸಾಲ ಕೊಟ್ಟಿದ್ದೀನಿ ವಾಪಸ್ ತಗೊಂಡು ಸಹವಾಸ ಬಿಡ್ತೀನಿ ಅಂತ ಮಾತು ಕೊಟ್ಟಿದ್ದಾರೆ.ನಂತರ ಮಹದೇವಾಚಾರಿ ತನ್ನ ಪತ್ನಿ ಹಾಗೂ ಮಕ್ಕಳ ಸಮೇತ ಕನಕಪುರದಲ್ಲಿ ನೆಲೆಸಿದ್ದಾರೆ.ಹೀಗಿದ್ದೂ ಇಬ್ಬರ ನಡುವೆ ಅಕ್ರಮ ಸಂಭಂಧ ಮುಂದುವರೆದಿದೆ.ಏಪ್ರಿಲ್ 8 ರಂದು ದೇವಸ್ಥಾನಕ್ಕೆ ಎಂದು ಮನೆ ಬಿಟ್ಟ ಮಂಜುಳಾ ಮನೆಗೆ ಹಿಂದಿರುಗಿಲ್ಲ.ಪ್ರಿಯಕರನ ಜೊತೆ ಹೋಗಿದ್ದಾಳೆಂದು ಖಚಿತಪಡಿಸಿಕೊಂಡ ಪತಿ ಮೌನಕ್ಕೆ ಶರಣಾಗಿದ್ದಾರೆ.ಏಪ್ರಿಲ್ 15 ರಂದು ಬೆಳಿಗ್ಗೆ ಹದಿನಾರುಕಾಲು ಮಂಟಪದ ಬಳಿ ಮಂಜುಳಾ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಠಾಣೆ ಪೊಲೀಸರು ತನಿಖೆ ಆರಂಭಿಸಿ ಆರೋಪಿಯನ್ನ ಬಂಧಿಸಿದ್ದಾರೆ.ಹಣ ಹಿಂದಿರುಗಿಸುವಂತೆ ಒತ್ತಡ ಹೇರಿದ್ದ ಪತ್ನಿಯನ್ನ ಶ್ಯಾಮ್ ಪ್ರಸಾದ್ ಕೊಲೆ ಮಾಡಿರುವುದಾಗಿ ಪತಿ ಮಹದೇವಾಚಾರಿ ದೂರು ನೀಡಿದ್ದಾರೆ.ಅಕ್ರಮ ಸಂಭಂಧಕ್ಕೆ ಹಾತೊರೆದು ಹಣ ಕಳೆದುಕೊಂಡ ಮಂಜುಳಾ ಪ್ರಾಣವನ್ನೂ ಕಳೆದುಕೊಂಡಿದ್ದಾಳೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *