ಕೆ.ಆರ್‌. ಕ್ಷೇತ್ರದಲ್ಲಿ ಯುವ ಮತದಾರರನ್ನು ಸಂಘಟಿಸಿ…ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಕರೆ…

ಕೆ.ಆರ್‌. ಕ್ಷೇತ್ರದಲ್ಲಿ ಯುವ ಮತದಾರರನ್ನು ಸಂಘಟಿಸಿ…ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಕರೆ…

ಮೈಸೂರು,ಏ18,Tv10 ಕನ್ನಡ
ಏಪ್ರಿಲ್ 20 ರಂದು ಕೆ.ಆರ್.ಕ್ಷೇತ್ರದ ಅಭ್ಯರ್ಥಿ ಶ್ರೀವತ್ಸ ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆಗೂ ಮುನ್ನ ಯುವಮತದಾರರನ್ನ ಸಂಘಟಿಸುವಂತೆ ಕರೆ ನೀಡಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಯುವಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಶ್ರೀವತ್ಸ ತಮ್ಮ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೂ ಮುನ್ನ ನಡೆಯುವ ಮೆರವಣಿಗೆಯಲ್ಲಿ ಕೃಷ್ಣರಾಜ ಕ್ಷೇತ್ರದ ಯುವ ಮತದಾರು ಹಾಗೂ ಹೊಸದಾಗಿ ಮತ ಹಾಕುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆ ಮಾಡಬೇಕೆಂದು ಮನವಿ ಮಾಡಿದರು.
ಯುವ ಮತದಾರರು ಮೆರವಣಿಗೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವ ಕುರಿತು ಸೂಚನೆ ನೀಡಲು ಈ ಸಭೆ ಕರೆಯಲಾಗಿತ್ತು. ಹೊಸ ಮತದಾರರಿಗೆ ಈಗ 18 ತುಂಬಿರುತ್ತದೆ. ಹೀಗಾಗಿ ಐದು ವರ್ಷಗಳ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ದುರಾಡಳಿತದ ತಿಳಿವಳಿಕೆ ಇರುವುದಿಲ್ಲ. ಅವರಿಗೆ ಅದನ್ನು ಮನವರಿಗೆ ಮಾಡಿಕೊಟ್ಟು ಬಿಜೆಪಿಯ ಕಾರ್ಯಕ್ರಮಗಳು ಹಾಗೂ ಆಶಯಗಳನ್ನು ತಿಳಿಸಿ ಪಕ್ಷ ಅಧಿಕಾರಕ್ಕೆ ತರಲು ಸಹಕರಿಸುವಂತೆ ಮನವಿ ಮಾಡಲು ಕಾರ್ಯಕ್ರಮಕ್ಕೆ ಯುವಕರನ್ನು ಕರೆತನ್ನಿ ಎಂದು ಸಲಹೆ ನೀಡಿದರು.

ಸಂಸದರಾದ ಪ್ರತಾಪಸಿಂಹ ಮಾತನಾಡಿ, ಮೈಸೂರಿನಲ್ಲಿ ಕೃಷ್ಣರಾಜ ಕ್ಷೇತ್ರದಲ್ಲಿ ಶ್ರೀವತ್ಸ ಅವರಿಗೆ ಟಿಕೆಟ್ ನೀಡಿರುವುದರಿಂದ ಹೊಸಬರಿಗೆ ಅವಕಾಶ ದೊರೆತಂತಾಗಿದೆ. ನಾನು ಚುನಾವಣೆಗೆ ಸ್ಪರ್ಧಿಸಿದಾಗ ಈ ಭಾಗದಲ್ಲಿ ಕಾಂಗ್ರೆಸ್ ಪ್ರಾಬಲ್ಯವಿದ್ದರೂ ನನ್ನನ್ನು 31,000 ಮತಗಳ ಅಂತರದಲ್ಲಿ ಕ್ಷೇತ್ರದ ಜನತೆ ಗೆಲ್ಲಿಸಿದ್ದೀರಿ. ಇದೇ ರೀತಿ ಶ್ರೀವತ್ಸ ಅವರನ್ನು 30,000 ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಯಾರಿಗೂ ಸ್ಥಾನ ಮಾನ ಶಾಶ್ವತವಲ್ಲ. ನಾನು 30 ರಿಂದ 40 ವರ್ಷ ರಾಜಕಾರಣ ಮಾಡಿದೆ ಎಂಬುದು ಶಾಶ್ವತವಲ್ಲ. ಈ ಅವಧಿಯಲ್ಲಿ ಎಷ್ಟು ಕೆಲಸ ಮಾಡಿದ್ದೇವೆ ಎಂಬುದು ಮುಖ್ಯ. ನಾವು ಸತ್ತ ನಂತರವೂ ನೆನಪಿಸಿಕೊಳ್ಳುವ ಕೆಲಸ ಮಾಡಬೇಕು. ಹೊಸಬರಿಗೆ ಅವಕಾಶ ನೀಡಬೇಕೆಂದು ಪಕ್ಷವು ತೆಗೆದುಕೊಂಡ ನಿರ್ಧಾರಗಳಿಂದ ಯಾರೂ ವಿಚಲಿತರಾಗಬಾರದು ಎಂದರು.

ಸಭೆಯಲ್ಲಿ ವಿಭಾಗ ಪ್ರಭಾರಿ ಮೈ.ವಿ. ರವಿಶಂಕರ್, ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಜಯಶಂಕರ್, ಕೆ.ಎಂ. ನಿಶಾಂತ್, ನಗರ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ವಾಣೀಶ್, ಹರ್ಷ, ಕೀರ್ತಿ, ಧನುಷ್, ಪ್ರಜೀಶ್, ಭರತ್, ಸಚಿನ್, ವಿನಯ್ ಹಾಗು ನೂರಾರು ಯುವಕರು ಉಪಸ್ಥಿತರಿದ್ದರು…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *