ಹಣದ ಹೊಳೆ ಹರಿಯುತ್ತಿರುವ ಆರೋಪ…ಹುಣಸೂರಿನಲ್ಲಿ ತಪಾಸಣೆ ಚುರುಕು…

ಹಣದ ಹೊಳೆ ಹರಿಯುತ್ತಿರುವ ಆರೋಪ…ಹುಣಸೂರಿನಲ್ಲಿ ತಪಾಸಣೆ ಚುರುಕು…

ಹುಣಸೂರು,ಏ21,Tv10 ಕನ್ನಡ
ಹುಣಸೂರು ವಿಧಾನಸಭಾ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸುತ್ತಿದೆ.ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯುತ್ತಿದೆ.ತಾನೇನೂ ಹಿಂದಿಲ್ಲ ಎಂಬಂತೆ ಬಿಜೆಪಿ ಸಹ ಗೆಲುವು ಸಾಧಿಸಬೇಕೆಂಬ ಹುಮ್ಮಸ್ಸಿನಲ್ಲಿ ತನ್ನ ಪ್ರಯತ್ನ ನಡೆಸುತ್ತಿದೆ.ಈ ಮಧ್ಯೆ ಕ್ಷೇತ್ರದಲ್ಲಿ ಹಣದ ಹೊಳೆ ಹರಿಯುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳೂ ಸಹ ಕೇಳಿ ಬರುತ್ತಿದೆ.ಈ ಹಿನ್ನಲೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಚುರುಕುಗೊಳಿಸಲಾಗುತ್ತಿದೆ.ಚುನಾವಣಾಧಿಕಾರಿಗಳು ರಾತ್ರಿ ಕಾರ್ಯಾಚರಣೆಯನ್ನ ಸದ್ದಿಲ್ಲದೆ ಕೈಗೊಳ್ಳುತ್ತಿದ್ದಾರೆ.ಮಾಹಿತಿ ಬಂದ ಕಡೆ ಧಿಢೀರ್ ದಾಳಿ ನಡೆಸುತ್ತಿದ್ದಾರೆ.ನಿನ್ನೆ ತಡರಾತ್ರಿ ಹೊಸರಾಮನಹಳ್ಳಿ ಬಳಿ ಹಣ ಹಂಚಲಾಗುತ್ತಿದೆ ಎಂಬ ಮಾಹಿತಿ ಬಂದೊಡನೆ ಚುನಾವಣಾಧಿಕಾರಿ ಮನು,ತಹಸೀಲ್ದಾರ್ ಅಶೋಕ್ ನೇತೃತ್ವದ ತಂಡ ಮಧ್ಯರಾತ್ರಿಯಲ್ಲಿ ಹಾಜರಾಗಿದ್ದಾರೆ.ಆದರೆ ಬಂದದಾರಿಗೆ ಸುಂಕವಿಲ್ಲವೆಂಬಂತೆ ಬರಿಗೈಲಿ ಹಿಂದಿರುಗಿದ್ದಾರೆ.ಆದರೂ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ.ಮನುಗನಹಳ್ಳಿ ಸೇರಿದಂತೆ ಎಲ್ಲಾ ಚೆಕ್ ಪೋಸ್ಟ್ ಗಳಲ್ಲೂ ತಪಾಸಣೆ ಬಿಗಿಗೊಳಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *