ಹೈಕಮಾಂಡ್ ಗೆ ಎಟಿಎಂ ಆಗಲು ಕಾಂಗ್ರೆಸ್ ರಾಜ್ಯದಲ್ಲಿ ಹುನ್ನಾರ ನಡೆಸುತ್ತಿದೆ…ಬಿ.ವೈ.ವಿಜಯೇಂದ್ರ…

ಹೈಕಮಾಂಡ್ ಗೆ ಎಟಿಎಂ ಆಗಲು ಕಾಂಗ್ರೆಸ್ ರಾಜ್ಯದಲ್ಲಿ ಹುನ್ನಾರ ನಡೆಸುತ್ತಿದೆ…ಬಿ.ವೈ.ವಿಜಯೇಂದ್ರ…

ಮೈಸೂರು,ಏ22,Tv10 ಕನ್ನಡ
ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಹೈಕಮಾಂಡ್ ಗೆ ಎಟಿಎಂ ಆಗಲು ಹುನ್ನಾರ ನಡೆಸುತ್ತಿದೆ ಎಂದು ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ್ದಾರೆ.
ಕಾಂಗ್ರೆಸ್ ದೇಶದಾದ್ಯಂತ ದಿವಾಳಿ ಆಗಿದೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತ ಹಿಡಿದು ಹೈ ಕಮಾಂಡ್ ಗೆ ಎಟಿಎಂ ಆಗಲು ಹುನ್ನಾರ ನಡೆಸುತ್ತಿದೆ. ಇಂತಹ ಬೆಳವಣಿಗೆಗರ ರಾಜ್ಯದ ಜನತೆ ಅವಕಾಶ ನೀಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನ ಹುನ್ನಾರ ತಿಳಿದಿರುವ ರಾಜ್ಯದ ಮತದಾರರು ಬಿಜೆಪಿಯನ್ನು ಚುನಾಯಿಸಲಿದ್ದಾರೆಂದು ತಿಳಿಸಿದರು.
ಈ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬಂದರೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕನಸನ್ನು ಜೆಡಿಎಸ್ ಕಾಣುತ್ತಿದೆ.
ಇವೆಲ್ಲವನ್ನು ಅರಿತಿರುವ ರಾಜ್ಯದ ಮತದಾರ ಈ ಸಾರಿ ಡಬ್ಬಲ್ ಇಂಜಿನ್ ಸರ್ಕಾರ ಬಿಜೆಪಿಯನ್ನು ಸಂಪೂರ್ಣವಾಗಿ ಬೆಂಬಲಿಸಿ ಗೆಲ್ಲಿಸಲಿದ್ದಾರೆಂಬ ವಿಶ್ವಾಸ ತಮಗಿದೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ವರುಣಾದಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಜಯ ಗಳಿಸಲಿದ್ದಾರೆಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿದರು. ನಮ್ಮ ತಂದೆ ಯಡಿಯೂರಪ್ಪನವರನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಅವರೊಂದು ಶಕ್ತಿ ಎಂದು ಟೀಕಾಕಾರರಿಗೆ ಉತ್ತರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಕೆಆರ್ ಕ್ಷೇತ್ರದ ಅಭ್ಯರ್ಥಿ ಶ್ರೀವತ್ಸ, ಮೇಯರ್ ಶಿವಕುಮಾರ್ , ನಗರ ಕಾರ್ಯಾಧ್ಯಕ್ಷ ಗಿರಿಧರ್ ಹಾಗೂ ವಕ್ತಾರ ಮೋಹನ್ ಉಪಸ್ಥಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *