ಹೈಕಮಾಂಡ್ ಗೆ ಎಟಿಎಂ ಆಗಲು ಕಾಂಗ್ರೆಸ್ ರಾಜ್ಯದಲ್ಲಿ ಹುನ್ನಾರ ನಡೆಸುತ್ತಿದೆ…ಬಿ.ವೈ.ವಿಜಯೇಂದ್ರ…

ಹೈಕಮಾಂಡ್ ಗೆ ಎಟಿಎಂ ಆಗಲು ಕಾಂಗ್ರೆಸ್ ರಾಜ್ಯದಲ್ಲಿ ಹುನ್ನಾರ ನಡೆಸುತ್ತಿದೆ…ಬಿ.ವೈ.ವಿಜಯೇಂದ್ರ…

ಮೈಸೂರು,ಏ22,Tv10 ಕನ್ನಡ
ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಹೈಕಮಾಂಡ್ ಗೆ ಎಟಿಎಂ ಆಗಲು ಹುನ್ನಾರ ನಡೆಸುತ್ತಿದೆ ಎಂದು ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ್ದಾರೆ.
ಕಾಂಗ್ರೆಸ್ ದೇಶದಾದ್ಯಂತ ದಿವಾಳಿ ಆಗಿದೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತ ಹಿಡಿದು ಹೈ ಕಮಾಂಡ್ ಗೆ ಎಟಿಎಂ ಆಗಲು ಹುನ್ನಾರ ನಡೆಸುತ್ತಿದೆ. ಇಂತಹ ಬೆಳವಣಿಗೆಗರ ರಾಜ್ಯದ ಜನತೆ ಅವಕಾಶ ನೀಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ನ ಹುನ್ನಾರ ತಿಳಿದಿರುವ ರಾಜ್ಯದ ಮತದಾರರು ಬಿಜೆಪಿಯನ್ನು ಚುನಾಯಿಸಲಿದ್ದಾರೆಂದು ತಿಳಿಸಿದರು.
ಈ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬಂದರೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕನಸನ್ನು ಜೆಡಿಎಸ್ ಕಾಣುತ್ತಿದೆ.
ಇವೆಲ್ಲವನ್ನು ಅರಿತಿರುವ ರಾಜ್ಯದ ಮತದಾರ ಈ ಸಾರಿ ಡಬ್ಬಲ್ ಇಂಜಿನ್ ಸರ್ಕಾರ ಬಿಜೆಪಿಯನ್ನು ಸಂಪೂರ್ಣವಾಗಿ ಬೆಂಬಲಿಸಿ ಗೆಲ್ಲಿಸಲಿದ್ದಾರೆಂಬ ವಿಶ್ವಾಸ ತಮಗಿದೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ವರುಣಾದಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣ ಅವರು ಸಿದ್ದರಾಮಯ್ಯ ವಿರುದ್ಧ ಜಯ ಗಳಿಸಲಿದ್ದಾರೆಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿದರು. ನಮ್ಮ ತಂದೆ ಯಡಿಯೂರಪ್ಪನವರನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ. ಅವರೊಂದು ಶಕ್ತಿ ಎಂದು ಟೀಕಾಕಾರರಿಗೆ ಉತ್ತರ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಕೆಆರ್ ಕ್ಷೇತ್ರದ ಅಭ್ಯರ್ಥಿ ಶ್ರೀವತ್ಸ, ಮೇಯರ್ ಶಿವಕುಮಾರ್ , ನಗರ ಕಾರ್ಯಾಧ್ಯಕ್ಷ ಗಿರಿಧರ್ ಹಾಗೂ ವಕ್ತಾರ ಮೋಹನ್ ಉಪಸ್ಥಿತರಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *