ಸಿದ್ದರಾಮಯ್ಯ ಸೋಲಿಗೆ ಪೊಲೀಸರು ಸಂಕಲ್ಪ ತೊಟ್ಟಿದ್ದಾರಂತೆ…ಕರ್ನಾಟಕ ಪೊಲೀಸ್ ಮಹಾಸಂಘ ಹೊರಡಿಸಿದೆ ಅಚ್ಚರಿ ಪ್ರಕಟಣೆ…

ಸಿದ್ದರಾಮಯ್ಯ ಸೋಲಿಗೆ ಪೊಲೀಸರು ಸಂಕಲ್ಪ ತೊಟ್ಟಿದ್ದಾರಂತೆ…ಕರ್ನಾಟಕ ಪೊಲೀಸ್ ಮಹಾಸಂಘ ಹೊರಡಿಸಿದೆ ಅಚ್ಚರಿ ಪ್ರಕಟಣೆ…

ಮೈಸೂರು,ಏ23,Tv10 ಕನ್ನಡ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗಾಗಿ ಕರ್ನಾಟಕ ಪೊಲೀಸ್ ಸಿಬ್ಬಂದಿಗಳು,ಕುಟುಂಬ ವರ್ಗ ಸಂಕಲ್ಪ ತೊಟ್ಟಿದೆಯಂತೆ.ಇಂತಹ ಸಂದೇಶವಿರುವ ಪತ್ರಿಕಾ ಪ್ರಕಟಣೆ ಕರ್ನಾಟಕ ಪೊಲೀಸ್ ಮಹಾಸಂಘ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಅಧ್ಯಕ್ಷ ಶಶಿಧರ್ ಸಹಿ ಇರುವ ಪ್ರಕಟಣೆ ರವಾನೆಯಾಗಿದೆ.ಪೊಲೀಸರ ವಿರೋಧಿ ನೀತಿಯನ್ನ ಅನುಸರಿಸಿರುವ ಸಿದ್ದರಾಮಯ್ಯ ರನ್ನ ಸೋಲಿಸುವುದಾಗಿ ಪಣತೊಟ್ಟಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2016 ರಲ್ಲಿ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪೊಲೀಸರು ಹೋರಾಟಕ್ಕೆ ಇಳಿದಿದ್ದರು.ಇದರ ಮುಂಚೂಣಿಯನ್ನ ಶಶಿಧರ್ ವಹಿಸಿದ್ದರು.ಹೋರಾಟ ಹತ್ತಿಕ್ಕಲು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರೆಸಿ 84 ದಿನಗಳ ಕಾಲ ಜೈಲಿಗೆ ಕಳಿಸಿದ್ದ ಬಗ್ಗೆ ಉಲ್ಲೇಖಿಸಿರುವ ಶಶಿಧರ್ ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸೋಲನುಭವಿಸಿದಂತೆ ಈ ಬಾರಿಯೂ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲನುಭವಿಸುತ್ತಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗೆ ಪೊಲೀಸರ ಪಾತ್ರ ಮಹತ್ತರವಾಗಿದೆ ಎಂದೂ ಸಹ ಉಲ್ಲೇಖವಾಗಿದೆ.

ಏ 18,2023 ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಪರಮೇಶ್ವರ್ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅಭಿಯೋಜಕ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು ಮುಂದಿನ ದಿನಗಳಲ್ಲಿ ರೋಚಕತೆ ಪಡೆಯಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *