ಸಿದ್ದರಾಮಯ್ಯ ಸೋಲಿಗೆ ಪೊಲೀಸರು ಸಂಕಲ್ಪ ತೊಟ್ಟಿದ್ದಾರಂತೆ…ಕರ್ನಾಟಕ ಪೊಲೀಸ್ ಮಹಾಸಂಘ ಹೊರಡಿಸಿದೆ ಅಚ್ಚರಿ ಪ್ರಕಟಣೆ…

ಸಿದ್ದರಾಮಯ್ಯ ಸೋಲಿಗೆ ಪೊಲೀಸರು ಸಂಕಲ್ಪ ತೊಟ್ಟಿದ್ದಾರಂತೆ…ಕರ್ನಾಟಕ ಪೊಲೀಸ್ ಮಹಾಸಂಘ ಹೊರಡಿಸಿದೆ ಅಚ್ಚರಿ ಪ್ರಕಟಣೆ…

ಮೈಸೂರು,ಏ23,Tv10 ಕನ್ನಡ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗಾಗಿ ಕರ್ನಾಟಕ ಪೊಲೀಸ್ ಸಿಬ್ಬಂದಿಗಳು,ಕುಟುಂಬ ವರ್ಗ ಸಂಕಲ್ಪ ತೊಟ್ಟಿದೆಯಂತೆ.ಇಂತಹ ಸಂದೇಶವಿರುವ ಪತ್ರಿಕಾ ಪ್ರಕಟಣೆ ಕರ್ನಾಟಕ ಪೊಲೀಸ್ ಮಹಾಸಂಘ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಅಧ್ಯಕ್ಷ ಶಶಿಧರ್ ಸಹಿ ಇರುವ ಪ್ರಕಟಣೆ ರವಾನೆಯಾಗಿದೆ.ಪೊಲೀಸರ ವಿರೋಧಿ ನೀತಿಯನ್ನ ಅನುಸರಿಸಿರುವ ಸಿದ್ದರಾಮಯ್ಯ ರನ್ನ ಸೋಲಿಸುವುದಾಗಿ ಪಣತೊಟ್ಟಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2016 ರಲ್ಲಿ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಪೊಲೀಸರು ಹೋರಾಟಕ್ಕೆ ಇಳಿದಿದ್ದರು.ಇದರ ಮುಂಚೂಣಿಯನ್ನ ಶಶಿಧರ್ ವಹಿಸಿದ್ದರು.ಹೋರಾಟ ಹತ್ತಿಕ್ಕಲು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರೆಸಿ 84 ದಿನಗಳ ಕಾಲ ಜೈಲಿಗೆ ಕಳಿಸಿದ್ದ ಬಗ್ಗೆ ಉಲ್ಲೇಖಿಸಿರುವ ಶಶಿಧರ್ ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸೋಲನುಭವಿಸಿದಂತೆ ಈ ಬಾರಿಯೂ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲನುಭವಿಸುತ್ತಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗೆ ಪೊಲೀಸರ ಪಾತ್ರ ಮಹತ್ತರವಾಗಿದೆ ಎಂದೂ ಸಹ ಉಲ್ಲೇಖವಾಗಿದೆ.

ಏ 18,2023 ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಪರಮೇಶ್ವರ್ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅಭಿಯೋಜಕ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು ಮುಂದಿನ ದಿನಗಳಲ್ಲಿ ರೋಚಕತೆ ಪಡೆಯಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *