ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ಚುನಾವಣಾ ವೆಚ್ಚ ಮಾಡಲು ಅವಕಾಶ …ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

ಮೈಸೂರು,ಏ25, ಸಾರ್ವತ್ರಿಕ ವಿಧಾನಸಬೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷದವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿದೆ. ಪ್ರತಿ ಅಭ್ಯರ್ಥಿಯು ಚುನಾವಣೆಯಲ್ಲಿ ತಾವು ಮಾಡುವ ವೆಚ್ಚವನ್ನು ತಮ್ಮ ಖರ್ಚು ವೆಚ್ಚ ಖಾತೆಯ ಮೂಲಕ ಮಾಡಿ ಲೆಕ್ಕ ಇಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದ್ದಾರೆ.

ಮೈಸೂರು ವಿಶ್ವ ವಿದ್ಯಾನಿಲಯದ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವೆಚ್ಚ ವೀಕ್ಷಕರು ಚುನಾವಣಾ ವೆಚ್ಚವನ್ನು 3 ಬಾರಿ ಪರಿಶೀಲನೆ ಮಾಡುತ್ತಾರೆ. ಒಬ್ಬ ಅಭ್ಯರ್ಥಿ 40 ಲಕ್ಷ ವೆಚ್ಚ ಮಾಡಲು ಮಿತಿ ಇರುತ್ತದೆ. 11 ವಿಧಾನ ಸಭಾ ಕ್ಷೇತ್ರ ಗಳಿಗೆ 9 ವೆಚ್ಚ ವೀಕ್ಷಕರು ಇದ್ದಾರೆ. ಜಿಲ್ಲೆಗೆ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರು ಇರುತ್ತಾರೆ ಎಂದರು.
ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಮುನ್ನ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ತಮ್ಮ ಖಾತೆಯನ್ನು ತೆರೆದಿರಬೇಕು.10 ಸಾವಿರಕ್ಕಿಂತ ಹೆಚ್ಚಿನ ಖರ್ಚು ಮಾಡಲು ಚೆಕ್, ಗೂಗಲ್ ಪೇ ಮೂಲಕವೇ ತಮ್ಮ ಖಾತೆಯ ಮೂಲಕವೇ ಮಾಡಬೇಕು. ನಾಮಪತ್ರ ಸಲ್ಲಿಸಿದ ದಿನದಿಂದ ಚುನಾವಣಾ ಫಲಿತಾಂಶ ಬರುವವರೆಗೆ ವೆಚ್ಚವನ್ನು ಲೆಕ್ಕ ಹಾಕಲಾಗುತ್ತದೆ. ಅಭ್ಯರ್ಥಿಗಳು ಮಾಡಿರುವ ಖರ್ಚು ವೆಚ್ಚಗಳನ್ನು ಅಭ್ಯರ್ಥಿಗಳು ಚುನಾವಣೆ ಮುಗಿದ 30 ದಿನಗಳ ಒಳಗೆ ನೀಡದಿದ್ದರೆ 3 ವರ್ಷದವರೆಗೆ ಅನರ್ಹನಾಗುತ್ತಾನೆ ಎಂದು ಎಚ್ಚರಿಕೆ ನೀಡಿದರು.
ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಯಾರಿಂದಲಾದರೂ ದೇಣಿಗೆ ಪಡೆದರೆ ಅದನ್ನು ತಮ್ಮ ಅಕೌಂಟ್‌ಗೆ ತೆಗೆದುಕೊಳ್ಳಬೇಕು. ಯಾವುದೇ ವ್ಯಕ್ತಿಗೆ 10 ಸಾವಿರಕ್ಕಿಂತ ಹೆಚ್ಚಿನ ಹಣವನ್ನು ಕ್ಯಾಷ್ ಮೂಲಕ ಪೂರ್ಣ ಚುನಾವಣಾ ಪ್ರಕ್ರಿಯೆ ಅವಧಿಯಲ್ಲಿ ನೀಡುವಂತಿಲ್ಲ ಎಂದು ಮಾಹಿತಿ ನೀಡಿದರು.
ಎಲ್ಲಾ ವೆಚ್ಚ ವೀಕ್ಷಕರು ಆಡಳಿತ ತರಬೇತಿ ಸಂಸ್ಥೆಯ ಕಬಿನಿ ಗೆಸ್ಟ್ ಹೌಸ್‌ನಲ್ಲಿ ಇರುತ್ತಾರೆ ತಮಗೆ ಮಾಹಿತಿ ಬೇಕಿದ್ದರೆ ಸಂಪರ್ಕಿಸಬಹುದು. ಅಭ್ಯರ್ಥಿಯು ಸ್ವತಃ ನಿಧಿಯಿಂದ ಹಣ ಖರ್ಚು ಮಾಡಲು ತಮ್ಮ ಹಣವನ್ನು ಚುನಾವಣೆಗೆ ತೆರೆದಿರುವ ಬ್ಯಾಂಕ್ ಖಾತೆಗೆ ಜಮಾ ಮಾಡಿ ನಂತರ ಖರ್ಚು ಮಾಡಬೇಕು. ಚುನಾವಣಾ ವೆಚ್ಚಕ್ಕೆ ಸಂಬಂದಿಸಿದ ಮಾಹಿತಿಗಳು ಆಂಗ್ಲ ಭಾಷೆಯಲ್ಲಿ ಇದ್ದು, ಇದನ್ನು ಆದಷ್ಟು ಕನ್ನಡ ಭಾಷೆಯಲ್ಲಿ ಒದಗಿಸಲು ಪ್ರಯತ್ನ ಮಾಡಲಾಗುವುದು. 7 ಎ ಅಂತಿಮವಾಗುತ್ತಿದ್ದು ಸೀರಿಯಲ್ ಸಂಖ್ಯೆಯನ್ನು ಅಭ್ಯರ್ಥಿಗಳಿಗೆ ನೀಡಲಾಗುವುದು ಎಂದರು.

ಕಾರ್ಯಾಗಾರದಲ್ಲಿ ವೆಚ್ಚ ವೀಕ್ಷಕರು, ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಮ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *