ದೇಶದ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಬರಬೇಕಿದೆ…ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್…

ದೇಶದ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಬರಬೇಕಿದೆ…ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್…

ಮೈಸೂರು,ಏ27,Tv10 ಕನ್ನಡ
ದೇಶದ ಹಾಗೂ ಜನರ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಕರ್ನಾಟಕದ ವಿಕಾಸದ ಜೊತೆ ದೇಶದ ವಿಕಾಸ ಸೇರಿದೆ.
ಇದನ್ನು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದರು.ಇದೇ ವೇಳೆ
ರಾಮದಾಸ್ ಅವರನ್ನು ಹಾಡಿ ಹೊಗಳಿದರು.
ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು.
ಶ್ರೀವತ್ಸ ಅವರಿಗೆ ಸ್ಥಾನ ಬಿಟ್ಟು ಕೊಟ್ಟಿದ್ದಾರೆ.
ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ.
ಕಾಂಗ್ರೆಸ್ ಕಾಲದಲ್ಲಿ ಹಿಂದೂಗಳ ಹತ್ಯೆಯಾಗಿತ್ತು.
ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ಅದೇ ಸ್ಥಿತಿ ಇತ್ತು.
ಒಂದು ರೀತಿ ನೆಗೆಟಿವ್ ವಾತಾವರಣ ಇತ್ತು.
ಪಿಎಫ್‌ಐ ಹಾವಳಿ ಹೆಚ್ಚಾಗಿತ್ತು.
ಕಾಂಗ್ರೆಸ್ ಇಷ್ಟು ವರ್ಷ ಸಾಮಾಜಿಕ ನ್ಯಾಯಕ್ಕಾಗಿ ಏನು ಮಾಡಿಲ್ಲ.
ಮೀಸಲಾತಿ ಹೆಚ್ಚಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾಕೆ ಮಾಡಲಿಲ್ಲ ಎಂದು
ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಹಾಕಿದರು.4% ಅಂಸವಿಧಾನತ್ಮಕವಾಗಿ ಮುಸ್ಲಿಂರಿಗೆ ನೀಡಲಾಗಿತ್ತು.
ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2% ನೀಡಲಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್ಸು ಎಂದಿದ್ದಾರೆ.
ಯಾರಿಂದ ಕಾಂಗ್ರೆಸ್ ವಾಪಸ್ಸು ಪಡೆಯುತ್ತದೆ ಸ್ಪಷ್ಟಪಡಿಸಬೇಕು.ಈಗಾಗಲೇ
ಕಾಂಗ್ರೆಸ್ ಒಡೆದ ಮನೆಯಂತಾಗಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಲಿಲ್ಲ.
ಕೇವಲ ಪಿಎಫ್‌ಐ ಮಾತ್ರ ಅಭಿವೃದ್ಧಿ ಆಯಿತು ಎಂದು ವಾಗ್ದಾಳಿ ನಡೆಸಿದರು…

Spread the love

Related post

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *