ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಮೈಸೂರು, ಏ.28,Tv10 ಕನ್ನಡ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30ರಂದು ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.ಮೋಧಿ ಕಾರ್ಯಕ್ರಮದ ಕುರಿತಂತೆ ಶಾಸಕ ಎಸ್.ಎ.ರಾಮದಾಸ್ ಮಾಹಿತಿ ನೀಡಿದ್ದಾರೆ.ಸಂಜೆ ಮೋಧಿ ರವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಮೈಸೂರು ಶೈಲಿಯಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುವುದು.ಮೈಸೂರಿನ ಸಂಪ್ರದಾಯದಂತೆ ನಾದ ಸ್ವರ, ಪೂರ್ಣಕುಂಭದೊಂದಿಗೆ ಪ್ರಧಾನಿ ಮೋದಿಯವರನ್ನ ಅದ್ದೂರಿಯಾಗಿ ಸ್ವಾಗತ ಮಾಡಲಾಗುತ್ತದೆ. ಜೊತೆಗೆ ದಸರಾ ಸಾಂಪ್ರದಾಯಿಕ ಮಾದರಿಯಲ್ಲಿ ಮೈಸೂರಿನ ಸಂಪ್ರದಾಯದ ಉಡುಗೆ ತೊಡುಗೆಗಳ ಮೂಲಕ ಅವರನ್ನ ಸ್ವಾಗತಿಸಿ, ಮೋದಿ ಅವರಿಗೆ ಮೈಸೂರು ಸಿಲ್ಕ್ ವಸ್ತ್ರ, ಮೈಸೂರು ವಿಳ್ಳೆದೆಲೆ, ಗೊಂಬೆ, ಗಂಧದ ಕಡ್ಡಿ ಸೇರಿದಂತೆ ಮೈಸೂರಿನ ಹಲವು ಪದಾರ್ಥಗಳನ್ನು ನೀಡಲಾಗುವುದೆಂದರು.
ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಮೈಸೂರಿನ ಗನ್ ಹೌಸ್ ಸರ್ಕಲ್ ನಿಂದ ರೋಡ್ ಶೋ ಆರಂಭಿಸಲಿದ್ದಾರೆ. ಗನ್ ಹೌಸ್ ನಿಂದ ಪಾಠಶಾಲೆ, ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ ಮೂಲಕ ಮಿಲೇನಿಯಂ ಸರ್ಕಲ್ ವರೆಗೂ ರೋಡ್ ಶೋ ನಡೆಯಲಿದೆ ಎಂದು ತಿಳಿಸಿದರು.
ಮಾರ್ಗ ಮಧ್ಯೆ ಮೋದಿಯವರ ಜೀವನದ ಯಶೋಗಾಥೆ ಸಾರುವ ಕಟೌಟ್ ಗಳನ್ನ ಅಳವಡಿಸಲಾಗುತ್ತದೆ. ಈ ರಾಲಿ ಕೇವಲ ರೋಡ್ ಶೋ ಮಾಡಿ ಹೋಗುವಂತದ್ದಲ್ಲ. ಅವರು ನಡೆದು ಬಂದ ಹಾದಿಯನ್ನೂ ತೋರಿಸುವ ಪ್ರಯತ್ನ ನಡೆಯುತ್ತದೆ ಎಂದರು.
ಸೀನಿಯರ್ ಸಿಟಿಜನ್ ಗೂ ಕೂಡ ಕುಳಿತು ನೋಡಲು ಕುರ್ಚಿಗಳ ವ್ಯವಸ್ಥೆ ಮಾಡಲಾಗುತ್ತದೆ. ಐದು ಸ್ಥಳಗಳಲ್ಲಿ ಸೀನಿಯರ್ ಸಿಟಿಜನ್ಸ್ ಕೂರಲು ವ್ಯವಸ್ಥೆ ಮಾಡಲಾಗುತ್ತದೆ.
ಒಟ್ಟು 4 ಕಿ.ಮೀ ರೋಡ್ ಶೋ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಶಾಸಕ ರಾಮದಾಸ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಅಭ್ಯರ್ಥಿ ಶ್ರೀವತ್ಸ, ಮುಖಂಡರುಗಲಾದ ರವಿಶಂಕರ್, ಯಶಸ್ವಿನಿ ಸೋಮಶೇಖರ್, ಹೆಚ್. ವಿ. ರಾಜೀವ್ ಉಪಸ್ಥಿತರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *