ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಮೈಸೂರು, ಏ.28,Tv10 ಕನ್ನಡ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30ರಂದು ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.ಮೋಧಿ ಕಾರ್ಯಕ್ರಮದ ಕುರಿತಂತೆ ಶಾಸಕ ಎಸ್.ಎ.ರಾಮದಾಸ್ ಮಾಹಿತಿ ನೀಡಿದ್ದಾರೆ.ಸಂಜೆ ಮೋಧಿ ರವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಮೈಸೂರು ಶೈಲಿಯಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುವುದು.ಮೈಸೂರಿನ ಸಂಪ್ರದಾಯದಂತೆ ನಾದ ಸ್ವರ, ಪೂರ್ಣಕುಂಭದೊಂದಿಗೆ ಪ್ರಧಾನಿ ಮೋದಿಯವರನ್ನ ಅದ್ದೂರಿಯಾಗಿ ಸ್ವಾಗತ ಮಾಡಲಾಗುತ್ತದೆ. ಜೊತೆಗೆ ದಸರಾ ಸಾಂಪ್ರದಾಯಿಕ ಮಾದರಿಯಲ್ಲಿ ಮೈಸೂರಿನ ಸಂಪ್ರದಾಯದ ಉಡುಗೆ ತೊಡುಗೆಗಳ ಮೂಲಕ ಅವರನ್ನ ಸ್ವಾಗತಿಸಿ, ಮೋದಿ ಅವರಿಗೆ ಮೈಸೂರು ಸಿಲ್ಕ್ ವಸ್ತ್ರ, ಮೈಸೂರು ವಿಳ್ಳೆದೆಲೆ, ಗೊಂಬೆ, ಗಂಧದ ಕಡ್ಡಿ ಸೇರಿದಂತೆ ಮೈಸೂರಿನ ಹಲವು ಪದಾರ್ಥಗಳನ್ನು ನೀಡಲಾಗುವುದೆಂದರು.
ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಮೈಸೂರಿನ ಗನ್ ಹೌಸ್ ಸರ್ಕಲ್ ನಿಂದ ರೋಡ್ ಶೋ ಆರಂಭಿಸಲಿದ್ದಾರೆ. ಗನ್ ಹೌಸ್ ನಿಂದ ಪಾಠಶಾಲೆ, ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ ಮೂಲಕ ಮಿಲೇನಿಯಂ ಸರ್ಕಲ್ ವರೆಗೂ ರೋಡ್ ಶೋ ನಡೆಯಲಿದೆ ಎಂದು ತಿಳಿಸಿದರು.
ಮಾರ್ಗ ಮಧ್ಯೆ ಮೋದಿಯವರ ಜೀವನದ ಯಶೋಗಾಥೆ ಸಾರುವ ಕಟೌಟ್ ಗಳನ್ನ ಅಳವಡಿಸಲಾಗುತ್ತದೆ. ಈ ರಾಲಿ ಕೇವಲ ರೋಡ್ ಶೋ ಮಾಡಿ ಹೋಗುವಂತದ್ದಲ್ಲ. ಅವರು ನಡೆದು ಬಂದ ಹಾದಿಯನ್ನೂ ತೋರಿಸುವ ಪ್ರಯತ್ನ ನಡೆಯುತ್ತದೆ ಎಂದರು.
ಸೀನಿಯರ್ ಸಿಟಿಜನ್ ಗೂ ಕೂಡ ಕುಳಿತು ನೋಡಲು ಕುರ್ಚಿಗಳ ವ್ಯವಸ್ಥೆ ಮಾಡಲಾಗುತ್ತದೆ. ಐದು ಸ್ಥಳಗಳಲ್ಲಿ ಸೀನಿಯರ್ ಸಿಟಿಜನ್ಸ್ ಕೂರಲು ವ್ಯವಸ್ಥೆ ಮಾಡಲಾಗುತ್ತದೆ.
ಒಟ್ಟು 4 ಕಿ.ಮೀ ರೋಡ್ ಶೋ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಶಾಸಕ ರಾಮದಾಸ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಅಭ್ಯರ್ಥಿ ಶ್ರೀವತ್ಸ, ಮುಖಂಡರುಗಲಾದ ರವಿಶಂಕರ್, ಯಶಸ್ವಿನಿ ಸೋಮಶೇಖರ್, ಹೆಚ್. ವಿ. ರಾಜೀವ್ ಉಪಸ್ಥಿತರಿದ್ದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *