ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಮೈಸೂರು, ಏ.28,Tv10 ಕನ್ನಡ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30ರಂದು ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.ಮೋಧಿ ಕಾರ್ಯಕ್ರಮದ ಕುರಿತಂತೆ ಶಾಸಕ ಎಸ್.ಎ.ರಾಮದಾಸ್ ಮಾಹಿತಿ ನೀಡಿದ್ದಾರೆ.ಸಂಜೆ ಮೋಧಿ ರವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಮೈಸೂರು ಶೈಲಿಯಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುವುದು.ಮೈಸೂರಿನ ಸಂಪ್ರದಾಯದಂತೆ ನಾದ ಸ್ವರ, ಪೂರ್ಣಕುಂಭದೊಂದಿಗೆ ಪ್ರಧಾನಿ ಮೋದಿಯವರನ್ನ ಅದ್ದೂರಿಯಾಗಿ ಸ್ವಾಗತ ಮಾಡಲಾಗುತ್ತದೆ. ಜೊತೆಗೆ ದಸರಾ ಸಾಂಪ್ರದಾಯಿಕ ಮಾದರಿಯಲ್ಲಿ ಮೈಸೂರಿನ ಸಂಪ್ರದಾಯದ ಉಡುಗೆ ತೊಡುಗೆಗಳ ಮೂಲಕ ಅವರನ್ನ ಸ್ವಾಗತಿಸಿ, ಮೋದಿ ಅವರಿಗೆ ಮೈಸೂರು ಸಿಲ್ಕ್ ವಸ್ತ್ರ, ಮೈಸೂರು ವಿಳ್ಳೆದೆಲೆ, ಗೊಂಬೆ, ಗಂಧದ ಕಡ್ಡಿ ಸೇರಿದಂತೆ ಮೈಸೂರಿನ ಹಲವು ಪದಾರ್ಥಗಳನ್ನು ನೀಡಲಾಗುವುದೆಂದರು.
ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಮೈಸೂರಿನ ಗನ್ ಹೌಸ್ ಸರ್ಕಲ್ ನಿಂದ ರೋಡ್ ಶೋ ಆರಂಭಿಸಲಿದ್ದಾರೆ. ಗನ್ ಹೌಸ್ ನಿಂದ ಪಾಠಶಾಲೆ, ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ ಮೂಲಕ ಮಿಲೇನಿಯಂ ಸರ್ಕಲ್ ವರೆಗೂ ರೋಡ್ ಶೋ ನಡೆಯಲಿದೆ ಎಂದು ತಿಳಿಸಿದರು.
ಮಾರ್ಗ ಮಧ್ಯೆ ಮೋದಿಯವರ ಜೀವನದ ಯಶೋಗಾಥೆ ಸಾರುವ ಕಟೌಟ್ ಗಳನ್ನ ಅಳವಡಿಸಲಾಗುತ್ತದೆ. ಈ ರಾಲಿ ಕೇವಲ ರೋಡ್ ಶೋ ಮಾಡಿ ಹೋಗುವಂತದ್ದಲ್ಲ. ಅವರು ನಡೆದು ಬಂದ ಹಾದಿಯನ್ನೂ ತೋರಿಸುವ ಪ್ರಯತ್ನ ನಡೆಯುತ್ತದೆ ಎಂದರು.
ಸೀನಿಯರ್ ಸಿಟಿಜನ್ ಗೂ ಕೂಡ ಕುಳಿತು ನೋಡಲು ಕುರ್ಚಿಗಳ ವ್ಯವಸ್ಥೆ ಮಾಡಲಾಗುತ್ತದೆ. ಐದು ಸ್ಥಳಗಳಲ್ಲಿ ಸೀನಿಯರ್ ಸಿಟಿಜನ್ಸ್ ಕೂರಲು ವ್ಯವಸ್ಥೆ ಮಾಡಲಾಗುತ್ತದೆ.
ಒಟ್ಟು 4 ಕಿ.ಮೀ ರೋಡ್ ಶೋ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಶಾಸಕ ರಾಮದಾಸ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಅಭ್ಯರ್ಥಿ ಶ್ರೀವತ್ಸ, ಮುಖಂಡರುಗಲಾದ ರವಿಶಂಕರ್, ಯಶಸ್ವಿನಿ ಸೋಮಶೇಖರ್, ಹೆಚ್. ವಿ. ರಾಜೀವ್ ಉಪಸ್ಥಿತರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *