ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಮೈಸೂರು, ಏ.28,Tv10 ಕನ್ನಡ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30ರಂದು ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.ಮೋಧಿ ಕಾರ್ಯಕ್ರಮದ ಕುರಿತಂತೆ ಶಾಸಕ ಎಸ್.ಎ.ರಾಮದಾಸ್ ಮಾಹಿತಿ ನೀಡಿದ್ದಾರೆ.ಸಂಜೆ ಮೋಧಿ ರವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಮೈಸೂರು ಶೈಲಿಯಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುವುದು.ಮೈಸೂರಿನ ಸಂಪ್ರದಾಯದಂತೆ ನಾದ ಸ್ವರ, ಪೂರ್ಣಕುಂಭದೊಂದಿಗೆ ಪ್ರಧಾನಿ ಮೋದಿಯವರನ್ನ ಅದ್ದೂರಿಯಾಗಿ ಸ್ವಾಗತ ಮಾಡಲಾಗುತ್ತದೆ. ಜೊತೆಗೆ ದಸರಾ ಸಾಂಪ್ರದಾಯಿಕ ಮಾದರಿಯಲ್ಲಿ ಮೈಸೂರಿನ ಸಂಪ್ರದಾಯದ ಉಡುಗೆ ತೊಡುಗೆಗಳ ಮೂಲಕ ಅವರನ್ನ ಸ್ವಾಗತಿಸಿ, ಮೋದಿ ಅವರಿಗೆ ಮೈಸೂರು ಸಿಲ್ಕ್ ವಸ್ತ್ರ, ಮೈಸೂರು ವಿಳ್ಳೆದೆಲೆ, ಗೊಂಬೆ, ಗಂಧದ ಕಡ್ಡಿ ಸೇರಿದಂತೆ ಮೈಸೂರಿನ ಹಲವು ಪದಾರ್ಥಗಳನ್ನು ನೀಡಲಾಗುವುದೆಂದರು.
ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಮೈಸೂರಿನ ಗನ್ ಹೌಸ್ ಸರ್ಕಲ್ ನಿಂದ ರೋಡ್ ಶೋ ಆರಂಭಿಸಲಿದ್ದಾರೆ. ಗನ್ ಹೌಸ್ ನಿಂದ ಪಾಠಶಾಲೆ, ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ ಮೂಲಕ ಮಿಲೇನಿಯಂ ಸರ್ಕಲ್ ವರೆಗೂ ರೋಡ್ ಶೋ ನಡೆಯಲಿದೆ ಎಂದು ತಿಳಿಸಿದರು.
ಮಾರ್ಗ ಮಧ್ಯೆ ಮೋದಿಯವರ ಜೀವನದ ಯಶೋಗಾಥೆ ಸಾರುವ ಕಟೌಟ್ ಗಳನ್ನ ಅಳವಡಿಸಲಾಗುತ್ತದೆ. ಈ ರಾಲಿ ಕೇವಲ ರೋಡ್ ಶೋ ಮಾಡಿ ಹೋಗುವಂತದ್ದಲ್ಲ. ಅವರು ನಡೆದು ಬಂದ ಹಾದಿಯನ್ನೂ ತೋರಿಸುವ ಪ್ರಯತ್ನ ನಡೆಯುತ್ತದೆ ಎಂದರು.
ಸೀನಿಯರ್ ಸಿಟಿಜನ್ ಗೂ ಕೂಡ ಕುಳಿತು ನೋಡಲು ಕುರ್ಚಿಗಳ ವ್ಯವಸ್ಥೆ ಮಾಡಲಾಗುತ್ತದೆ. ಐದು ಸ್ಥಳಗಳಲ್ಲಿ ಸೀನಿಯರ್ ಸಿಟಿಜನ್ಸ್ ಕೂರಲು ವ್ಯವಸ್ಥೆ ಮಾಡಲಾಗುತ್ತದೆ.
ಒಟ್ಟು 4 ಕಿ.ಮೀ ರೋಡ್ ಶೋ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಶಾಸಕ ರಾಮದಾಸ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಅಭ್ಯರ್ಥಿ ಶ್ರೀವತ್ಸ, ಮುಖಂಡರುಗಲಾದ ರವಿಶಂಕರ್, ಯಶಸ್ವಿನಿ ಸೋಮಶೇಖರ್, ಹೆಚ್. ವಿ. ರಾಜೀವ್ ಉಪಸ್ಥಿತರಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *