ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಮೈಸೂರು, ಏ.28,Tv10 ಕನ್ನಡ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30ರಂದು ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.ಮೋಧಿ ಕಾರ್ಯಕ್ರಮದ ಕುರಿತಂತೆ ಶಾಸಕ ಎಸ್.ಎ.ರಾಮದಾಸ್ ಮಾಹಿತಿ ನೀಡಿದ್ದಾರೆ.ಸಂಜೆ ಮೋಧಿ ರವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಮೈಸೂರು ಶೈಲಿಯಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುವುದು.ಮೈಸೂರಿನ ಸಂಪ್ರದಾಯದಂತೆ ನಾದ ಸ್ವರ, ಪೂರ್ಣಕುಂಭದೊಂದಿಗೆ ಪ್ರಧಾನಿ ಮೋದಿಯವರನ್ನ ಅದ್ದೂರಿಯಾಗಿ ಸ್ವಾಗತ ಮಾಡಲಾಗುತ್ತದೆ. ಜೊತೆಗೆ ದಸರಾ ಸಾಂಪ್ರದಾಯಿಕ ಮಾದರಿಯಲ್ಲಿ ಮೈಸೂರಿನ ಸಂಪ್ರದಾಯದ ಉಡುಗೆ ತೊಡುಗೆಗಳ ಮೂಲಕ ಅವರನ್ನ ಸ್ವಾಗತಿಸಿ, ಮೋದಿ ಅವರಿಗೆ ಮೈಸೂರು ಸಿಲ್ಕ್ ವಸ್ತ್ರ, ಮೈಸೂರು ವಿಳ್ಳೆದೆಲೆ, ಗೊಂಬೆ, ಗಂಧದ ಕಡ್ಡಿ ಸೇರಿದಂತೆ ಮೈಸೂರಿನ ಹಲವು ಪದಾರ್ಥಗಳನ್ನು ನೀಡಲಾಗುವುದೆಂದರು.
ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಮೈಸೂರಿನ ಗನ್ ಹೌಸ್ ಸರ್ಕಲ್ ನಿಂದ ರೋಡ್ ಶೋ ಆರಂಭಿಸಲಿದ್ದಾರೆ. ಗನ್ ಹೌಸ್ ನಿಂದ ಪಾಠಶಾಲೆ, ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ ಮೂಲಕ ಮಿಲೇನಿಯಂ ಸರ್ಕಲ್ ವರೆಗೂ ರೋಡ್ ಶೋ ನಡೆಯಲಿದೆ ಎಂದು ತಿಳಿಸಿದರು.
ಮಾರ್ಗ ಮಧ್ಯೆ ಮೋದಿಯವರ ಜೀವನದ ಯಶೋಗಾಥೆ ಸಾರುವ ಕಟೌಟ್ ಗಳನ್ನ ಅಳವಡಿಸಲಾಗುತ್ತದೆ. ಈ ರಾಲಿ ಕೇವಲ ರೋಡ್ ಶೋ ಮಾಡಿ ಹೋಗುವಂತದ್ದಲ್ಲ. ಅವರು ನಡೆದು ಬಂದ ಹಾದಿಯನ್ನೂ ತೋರಿಸುವ ಪ್ರಯತ್ನ ನಡೆಯುತ್ತದೆ ಎಂದರು.
ಸೀನಿಯರ್ ಸಿಟಿಜನ್ ಗೂ ಕೂಡ ಕುಳಿತು ನೋಡಲು ಕುರ್ಚಿಗಳ ವ್ಯವಸ್ಥೆ ಮಾಡಲಾಗುತ್ತದೆ. ಐದು ಸ್ಥಳಗಳಲ್ಲಿ ಸೀನಿಯರ್ ಸಿಟಿಜನ್ಸ್ ಕೂರಲು ವ್ಯವಸ್ಥೆ ಮಾಡಲಾಗುತ್ತದೆ.
ಒಟ್ಟು 4 ಕಿ.ಮೀ ರೋಡ್ ಶೋ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಶಾಸಕ ರಾಮದಾಸ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಅಭ್ಯರ್ಥಿ ಶ್ರೀವತ್ಸ, ಮುಖಂಡರುಗಲಾದ ರವಿಶಂಕರ್, ಯಶಸ್ವಿನಿ ಸೋಮಶೇಖರ್, ಹೆಚ್. ವಿ. ರಾಜೀವ್ ಉಪಸ್ಥಿತರಿದ್ದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *