ಅಣ್ಣ ‘ಕೈ’ ಅಭ್ಯರ್ಥಿ… ಜೆಡಿಎಸ್ ಬೆಂಬಲಕ್ಕೆ ನಿಂತ ತಂಗಿ…ಏನಾಗಿದೆ ಅನಿಲ್ ಚಿಕ್ಕಮಾದು ಕುಟುಂಬದಲ್ಲಿ…?

ಅಣ್ಣ ‘ಕೈ’ ಅಭ್ಯರ್ಥಿ… ಜೆಡಿಎಸ್ ಬೆಂಬಲಕ್ಕೆ ನಿಂತ ತಂಗಿ…ಏನಾಗಿದೆ ಅನಿಲ್ ಚಿಕ್ಕಮಾದು ಕುಟುಂಬದಲ್ಲಿ…?

ಹುಣಸೂರು,ಏ28,Tv10 ಕನ್ನಡ
ಹೆಚ್.ಡಿ.ಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನಿಲ್ ಚಿಕ್ಕಮಾದು ಎರಡನೇ ಬಾರಿಯ ಗೆಲುವಿಗಾಗಿ ಹರಸಾಹಸ ನಡೆಸುತ್ತಿದ್ದರೆ ಇತ್ತ ಹುಣಸೂರಿನಲ್ಲಿ ಸಹೋದರಿ ರಂಜಿತಾ ಚಿಕ್ಕಮಾದು ಜಿಟಿಡಿ ಪುತ್ರ ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಪರ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಚಿಕ್ಕಮಾದು ಮಕ್ಕಳು ಅಣ್ಣತಂಗಿಯರಲ್ಲಿ ವಿಭಿನ್ನ ಅಭಿಪ್ರಾಯ ರಾಜಕೀಯ ಪಂಡಿತರಿಗೆ ಹುಬ್ಬೇರಿಸುವಂತಾಗಿದೆ.ಹೆಚ್.ಡಿ.ಕೋಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಅನಿಲ್ ಚಿಕ್ಕಮಾದು ಗೆಲುವಿಗಾಗಿ ರಾತ್ರಿ ಹಗಲು ಮತದಾರರ ಮನೆಬಾಗಿಲು ತಟ್ಟಿ ಮನವಿ ಮಾಡುತ್ತಿದ್ದರೆ.ಇತ್ತ ರಂಜಿತಾ ಚಿಕ್ಕಮಾದು ಹಗಲಿರುಳೆನ್ನದೆ ಜಿ.ಡಿ.ಹರೀಶ್ ಗೌಡ ಗೆಲುವಿಗಾಗಿ ಪ್ರಚಾರದಲ್ಲಿ ಕಸರತ್ತು ನಡೆಸುತ್ತಿದ್ದಾರೆ.ಅನಿಲ್ ಚಿಕ್ಜಮಾದು ರವರು ಗೆಲುವಿನ ಮೂಲಕ ಸಿದ್ದರಾಮಯ್ಯ ಕೈ ಬಲಪಡಿಸಿ ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವ ಕನಸು ಕಾಣುತ್ತಿದ್ದರೆ ಸಹೋದರಿ ರಂಜಿತಾ ಚಿಕ್ಕಮಾದು ಮಾತ್ರ ಹರೀಶ್ ಗೌಡ ಕೈ ಬಲಪಡಿಸಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ.ಹರೀಶ್ ಗೌಡರ ಪ್ರಚಾರದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ರಂಜಿತಾ ಚಿಕ್ಕಮಾದು ಕಾಂಗ್ರೆಸ್ ಗೆ ಸಡ್ಡುಹೊಡೆದು ಜೆಡಿಎಸ್ ಆಶ್ರಯ ಪಡೆದಿದ್ದಾರೆ.ಕಾಂಗ್ರೆಸ್ ನಲ್ಲಿ ಟಿಕೆಟ್ ದೊರೆತು ಎರಡನೇ ಬಾರಿಗೆ ಶಾಸಕನಾಗುವ ಪ್ರಯತ್ನದಲ್ಲಿರುವ ಅನಿಲ್ ಚಿಕ್ಕಮಾದು ಪರ ಸಹೋದರಿ ಇದುವರೆಗೆ ಪ್ರಚಾರಕ್ಕೆ ಬಂದಿಲ್ಲ.ಒಂದೇ ಕುಟುಂಬದಲ್ಲಿ ಅಣ್ಣತಂಗಿಯರ ದ್ವಂದ್ವ ನಿಲುವು ಅಚ್ಚರಿಗೆ ಕಾರಣವಾಗಿದೆ.ಇದು ಇಬ್ಬರ ನಡುವಿನ ಭಿನ್ನಾಭಿಪ್ರಾಯದ ಸೂಚನೆಯೇ ಎಂಬ ಪ್ರಶ್ನೆ ರಾಜಕೀಯ ಪಂಡಿತರನ್ನ ಕಾಡುತ್ತಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *