ಅಣ್ಣ ‘ಕೈ’ ಅಭ್ಯರ್ಥಿ… ಜೆಡಿಎಸ್ ಬೆಂಬಲಕ್ಕೆ ನಿಂತ ತಂಗಿ…ಏನಾಗಿದೆ ಅನಿಲ್ ಚಿಕ್ಕಮಾದು ಕುಟುಂಬದಲ್ಲಿ…?

ಅಣ್ಣ ‘ಕೈ’ ಅಭ್ಯರ್ಥಿ… ಜೆಡಿಎಸ್ ಬೆಂಬಲಕ್ಕೆ ನಿಂತ ತಂಗಿ…ಏನಾಗಿದೆ ಅನಿಲ್ ಚಿಕ್ಕಮಾದು ಕುಟುಂಬದಲ್ಲಿ…?

ಹುಣಸೂರು,ಏ28,Tv10 ಕನ್ನಡ
ಹೆಚ್.ಡಿ.ಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನಿಲ್ ಚಿಕ್ಕಮಾದು ಎರಡನೇ ಬಾರಿಯ ಗೆಲುವಿಗಾಗಿ ಹರಸಾಹಸ ನಡೆಸುತ್ತಿದ್ದರೆ ಇತ್ತ ಹುಣಸೂರಿನಲ್ಲಿ ಸಹೋದರಿ ರಂಜಿತಾ ಚಿಕ್ಕಮಾದು ಜಿಟಿಡಿ ಪುತ್ರ ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಪರ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಚಿಕ್ಕಮಾದು ಮಕ್ಕಳು ಅಣ್ಣತಂಗಿಯರಲ್ಲಿ ವಿಭಿನ್ನ ಅಭಿಪ್ರಾಯ ರಾಜಕೀಯ ಪಂಡಿತರಿಗೆ ಹುಬ್ಬೇರಿಸುವಂತಾಗಿದೆ.ಹೆಚ್.ಡಿ.ಕೋಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಅನಿಲ್ ಚಿಕ್ಕಮಾದು ಗೆಲುವಿಗಾಗಿ ರಾತ್ರಿ ಹಗಲು ಮತದಾರರ ಮನೆಬಾಗಿಲು ತಟ್ಟಿ ಮನವಿ ಮಾಡುತ್ತಿದ್ದರೆ.ಇತ್ತ ರಂಜಿತಾ ಚಿಕ್ಕಮಾದು ಹಗಲಿರುಳೆನ್ನದೆ ಜಿ.ಡಿ.ಹರೀಶ್ ಗೌಡ ಗೆಲುವಿಗಾಗಿ ಪ್ರಚಾರದಲ್ಲಿ ಕಸರತ್ತು ನಡೆಸುತ್ತಿದ್ದಾರೆ.ಅನಿಲ್ ಚಿಕ್ಜಮಾದು ರವರು ಗೆಲುವಿನ ಮೂಲಕ ಸಿದ್ದರಾಮಯ್ಯ ಕೈ ಬಲಪಡಿಸಿ ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವ ಕನಸು ಕಾಣುತ್ತಿದ್ದರೆ ಸಹೋದರಿ ರಂಜಿತಾ ಚಿಕ್ಕಮಾದು ಮಾತ್ರ ಹರೀಶ್ ಗೌಡ ಕೈ ಬಲಪಡಿಸಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ.ಹರೀಶ್ ಗೌಡರ ಪ್ರಚಾರದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ರಂಜಿತಾ ಚಿಕ್ಕಮಾದು ಕಾಂಗ್ರೆಸ್ ಗೆ ಸಡ್ಡುಹೊಡೆದು ಜೆಡಿಎಸ್ ಆಶ್ರಯ ಪಡೆದಿದ್ದಾರೆ.ಕಾಂಗ್ರೆಸ್ ನಲ್ಲಿ ಟಿಕೆಟ್ ದೊರೆತು ಎರಡನೇ ಬಾರಿಗೆ ಶಾಸಕನಾಗುವ ಪ್ರಯತ್ನದಲ್ಲಿರುವ ಅನಿಲ್ ಚಿಕ್ಕಮಾದು ಪರ ಸಹೋದರಿ ಇದುವರೆಗೆ ಪ್ರಚಾರಕ್ಕೆ ಬಂದಿಲ್ಲ.ಒಂದೇ ಕುಟುಂಬದಲ್ಲಿ ಅಣ್ಣತಂಗಿಯರ ದ್ವಂದ್ವ ನಿಲುವು ಅಚ್ಚರಿಗೆ ಕಾರಣವಾಗಿದೆ.ಇದು ಇಬ್ಬರ ನಡುವಿನ ಭಿನ್ನಾಭಿಪ್ರಾಯದ ಸೂಚನೆಯೇ ಎಂಬ ಪ್ರಶ್ನೆ ರಾಜಕೀಯ ಪಂಡಿತರನ್ನ ಕಾಡುತ್ತಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *