ಅಣ್ಣ ‘ಕೈ’ ಅಭ್ಯರ್ಥಿ… ಜೆಡಿಎಸ್ ಬೆಂಬಲಕ್ಕೆ ನಿಂತ ತಂಗಿ…ಏನಾಗಿದೆ ಅನಿಲ್ ಚಿಕ್ಕಮಾದು ಕುಟುಂಬದಲ್ಲಿ…?

ಅಣ್ಣ ‘ಕೈ’ ಅಭ್ಯರ್ಥಿ… ಜೆಡಿಎಸ್ ಬೆಂಬಲಕ್ಕೆ ನಿಂತ ತಂಗಿ…ಏನಾಗಿದೆ ಅನಿಲ್ ಚಿಕ್ಕಮಾದು ಕುಟುಂಬದಲ್ಲಿ…?

ಹುಣಸೂರು,ಏ28,Tv10 ಕನ್ನಡ
ಹೆಚ್.ಡಿ.ಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನಿಲ್ ಚಿಕ್ಕಮಾದು ಎರಡನೇ ಬಾರಿಯ ಗೆಲುವಿಗಾಗಿ ಹರಸಾಹಸ ನಡೆಸುತ್ತಿದ್ದರೆ ಇತ್ತ ಹುಣಸೂರಿನಲ್ಲಿ ಸಹೋದರಿ ರಂಜಿತಾ ಚಿಕ್ಕಮಾದು ಜಿಟಿಡಿ ಪುತ್ರ ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಪರ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಚಿಕ್ಕಮಾದು ಮಕ್ಕಳು ಅಣ್ಣತಂಗಿಯರಲ್ಲಿ ವಿಭಿನ್ನ ಅಭಿಪ್ರಾಯ ರಾಜಕೀಯ ಪಂಡಿತರಿಗೆ ಹುಬ್ಬೇರಿಸುವಂತಾಗಿದೆ.ಹೆಚ್.ಡಿ.ಕೋಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಅನಿಲ್ ಚಿಕ್ಕಮಾದು ಗೆಲುವಿಗಾಗಿ ರಾತ್ರಿ ಹಗಲು ಮತದಾರರ ಮನೆಬಾಗಿಲು ತಟ್ಟಿ ಮನವಿ ಮಾಡುತ್ತಿದ್ದರೆ.ಇತ್ತ ರಂಜಿತಾ ಚಿಕ್ಕಮಾದು ಹಗಲಿರುಳೆನ್ನದೆ ಜಿ.ಡಿ.ಹರೀಶ್ ಗೌಡ ಗೆಲುವಿಗಾಗಿ ಪ್ರಚಾರದಲ್ಲಿ ಕಸರತ್ತು ನಡೆಸುತ್ತಿದ್ದಾರೆ.ಅನಿಲ್ ಚಿಕ್ಜಮಾದು ರವರು ಗೆಲುವಿನ ಮೂಲಕ ಸಿದ್ದರಾಮಯ್ಯ ಕೈ ಬಲಪಡಿಸಿ ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವ ಕನಸು ಕಾಣುತ್ತಿದ್ದರೆ ಸಹೋದರಿ ರಂಜಿತಾ ಚಿಕ್ಕಮಾದು ಮಾತ್ರ ಹರೀಶ್ ಗೌಡ ಕೈ ಬಲಪಡಿಸಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ.ಹರೀಶ್ ಗೌಡರ ಪ್ರಚಾರದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ರಂಜಿತಾ ಚಿಕ್ಕಮಾದು ಕಾಂಗ್ರೆಸ್ ಗೆ ಸಡ್ಡುಹೊಡೆದು ಜೆಡಿಎಸ್ ಆಶ್ರಯ ಪಡೆದಿದ್ದಾರೆ.ಕಾಂಗ್ರೆಸ್ ನಲ್ಲಿ ಟಿಕೆಟ್ ದೊರೆತು ಎರಡನೇ ಬಾರಿಗೆ ಶಾಸಕನಾಗುವ ಪ್ರಯತ್ನದಲ್ಲಿರುವ ಅನಿಲ್ ಚಿಕ್ಕಮಾದು ಪರ ಸಹೋದರಿ ಇದುವರೆಗೆ ಪ್ರಚಾರಕ್ಕೆ ಬಂದಿಲ್ಲ.ಒಂದೇ ಕುಟುಂಬದಲ್ಲಿ ಅಣ್ಣತಂಗಿಯರ ದ್ವಂದ್ವ ನಿಲುವು ಅಚ್ಚರಿಗೆ ಕಾರಣವಾಗಿದೆ.ಇದು ಇಬ್ಬರ ನಡುವಿನ ಭಿನ್ನಾಭಿಪ್ರಾಯದ ಸೂಚನೆಯೇ ಎಂಬ ಪ್ರಶ್ನೆ ರಾಜಕೀಯ ಪಂಡಿತರನ್ನ ಕಾಡುತ್ತಿದೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *