ಅಣ್ಣ ‘ಕೈ’ ಅಭ್ಯರ್ಥಿ… ಜೆಡಿಎಸ್ ಬೆಂಬಲಕ್ಕೆ ನಿಂತ ತಂಗಿ…ಏನಾಗಿದೆ ಅನಿಲ್ ಚಿಕ್ಕಮಾದು ಕುಟುಂಬದಲ್ಲಿ…?

ಅಣ್ಣ ‘ಕೈ’ ಅಭ್ಯರ್ಥಿ… ಜೆಡಿಎಸ್ ಬೆಂಬಲಕ್ಕೆ ನಿಂತ ತಂಗಿ…ಏನಾಗಿದೆ ಅನಿಲ್ ಚಿಕ್ಕಮಾದು ಕುಟುಂಬದಲ್ಲಿ…?

ಹುಣಸೂರು,ಏ28,Tv10 ಕನ್ನಡ
ಹೆಚ್.ಡಿ.ಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನಿಲ್ ಚಿಕ್ಕಮಾದು ಎರಡನೇ ಬಾರಿಯ ಗೆಲುವಿಗಾಗಿ ಹರಸಾಹಸ ನಡೆಸುತ್ತಿದ್ದರೆ ಇತ್ತ ಹುಣಸೂರಿನಲ್ಲಿ ಸಹೋದರಿ ರಂಜಿತಾ ಚಿಕ್ಕಮಾದು ಜಿಟಿಡಿ ಪುತ್ರ ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಪರ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಚಿಕ್ಕಮಾದು ಮಕ್ಕಳು ಅಣ್ಣತಂಗಿಯರಲ್ಲಿ ವಿಭಿನ್ನ ಅಭಿಪ್ರಾಯ ರಾಜಕೀಯ ಪಂಡಿತರಿಗೆ ಹುಬ್ಬೇರಿಸುವಂತಾಗಿದೆ.ಹೆಚ್.ಡಿ.ಕೋಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಅನಿಲ್ ಚಿಕ್ಕಮಾದು ಗೆಲುವಿಗಾಗಿ ರಾತ್ರಿ ಹಗಲು ಮತದಾರರ ಮನೆಬಾಗಿಲು ತಟ್ಟಿ ಮನವಿ ಮಾಡುತ್ತಿದ್ದರೆ.ಇತ್ತ ರಂಜಿತಾ ಚಿಕ್ಕಮಾದು ಹಗಲಿರುಳೆನ್ನದೆ ಜಿ.ಡಿ.ಹರೀಶ್ ಗೌಡ ಗೆಲುವಿಗಾಗಿ ಪ್ರಚಾರದಲ್ಲಿ ಕಸರತ್ತು ನಡೆಸುತ್ತಿದ್ದಾರೆ.ಅನಿಲ್ ಚಿಕ್ಜಮಾದು ರವರು ಗೆಲುವಿನ ಮೂಲಕ ಸಿದ್ದರಾಮಯ್ಯ ಕೈ ಬಲಪಡಿಸಿ ಮತ್ತೊಮ್ಮೆ ಮುಖ್ಯಮಂತ್ರಿ ಮಾಡುವ ಕನಸು ಕಾಣುತ್ತಿದ್ದರೆ ಸಹೋದರಿ ರಂಜಿತಾ ಚಿಕ್ಕಮಾದು ಮಾತ್ರ ಹರೀಶ್ ಗೌಡ ಕೈ ಬಲಪಡಿಸಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ.ಹರೀಶ್ ಗೌಡರ ಪ್ರಚಾರದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ರಂಜಿತಾ ಚಿಕ್ಕಮಾದು ಕಾಂಗ್ರೆಸ್ ಗೆ ಸಡ್ಡುಹೊಡೆದು ಜೆಡಿಎಸ್ ಆಶ್ರಯ ಪಡೆದಿದ್ದಾರೆ.ಕಾಂಗ್ರೆಸ್ ನಲ್ಲಿ ಟಿಕೆಟ್ ದೊರೆತು ಎರಡನೇ ಬಾರಿಗೆ ಶಾಸಕನಾಗುವ ಪ್ರಯತ್ನದಲ್ಲಿರುವ ಅನಿಲ್ ಚಿಕ್ಕಮಾದು ಪರ ಸಹೋದರಿ ಇದುವರೆಗೆ ಪ್ರಚಾರಕ್ಕೆ ಬಂದಿಲ್ಲ.ಒಂದೇ ಕುಟುಂಬದಲ್ಲಿ ಅಣ್ಣತಂಗಿಯರ ದ್ವಂದ್ವ ನಿಲುವು ಅಚ್ಚರಿಗೆ ಕಾರಣವಾಗಿದೆ.ಇದು ಇಬ್ಬರ ನಡುವಿನ ಭಿನ್ನಾಭಿಪ್ರಾಯದ ಸೂಚನೆಯೇ ಎಂಬ ಪ್ರಶ್ನೆ ರಾಜಕೀಯ ಪಂಡಿತರನ್ನ ಕಾಡುತ್ತಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *