ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು: ಸಿ.ಆರ್.ದಿನೇಶ್.

ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು: ಸಿ.ಆರ್.ದಿನೇಶ್.

ಕೆ.ಆರ್. ಪೇಟೆ: ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ. ಅದರಿಂದಾಗಿಯೇ ಹದಿನೆಂಟು ವಯಸ್ಸಿನಿಂದ ಎಲ್ಲರೂ ಮತ ಚಲಾಯಿಸುವ ಹಕ್ಕನ್ನು ಹೊಂದಿರುತ್ತಾರೆ. ಹಾಗಾಗಿ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಬಲ್ಲೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ವಿದ್ಯಾರ್ಥಿಗಳಿಗೆ ತಿಳಿಸಿದರು.

ಇಂದು ಕಾಲೇಜಿನಲ್ಲಿ ಸ್ವೀಪ್ ನ ಅಡಿಯಲ್ಲಿ ನಡೆದ ಮತದಾನದ ಮಹತ್ವದ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವಕರೆಲ್ಲರು ತಮ್ಮ ತಮ್ಮ ಕುಟುಂಬ ಹಾಗೂ ನೆರೆಹೊರೆಯವರಲ್ಲಿ ಮತದಾನದ ಜಾಗೃತಿ ಮೂಡಿಸುವ ಕಾರ್ಯವು ಪ್ರಸ್ತುತ ಕಾಲದಲ್ಲಿ ಹೆಚ್ಚು ಅನಿವಾರ್ಯವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಸರ್ವರ ಪಾಲೂ ಇರುತ್ತದೆಂಬುದನ್ನು ಮನದಟ್ಟು ಮಾಡಿಸಿ, ಅದಕ್ಕಾಗಿ ಮತದಾನದ ದಿನ ತಪ್ಪದೆ ಮತದಾನ ಮಾಡುವಂತೆ ಪ್ರೇರೇಪಿಸಬೇಕೆಂದು ತಿಳಿಸಿದರು.

ಕಾಲೇಜಿಗೆ ರಜೆಯಿದ್ದರೂ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳೆಲ್ಲರೂ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಒಟ್ಟುಗೂಡಿ ಬಲ್ಲೇನಹಳ್ಳಿಯ ಮನೆಮನೆಗೆ ತೆರಳಿ ಮತದಾನದ ಮಹತ್ವದ ಅರಿವು ಮೂಡಿಸಿದರು.
ಮತದಾನದ ದಿನ ಮತಗಟ್ಟಿಗೆ ಮತದಾರರನ್ನು ಕರೆತಂದು ಮತ ಚಲಾಯಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರತಿಜ್ಞೆಯನ್ನು ಸಹಾ ವಿದ್ಯಾರ್ಥಿಗಳು ಸ್ವೀಕರಿಸಿದರು.
ಈ ಕಾರ್ಯದಲ್ಲಿ ಹಿರಿಯ ಉಪನ್ಯಾಸಕರಾದ ಹೆಚ್.ಎನ್.ರಂಗರಾಜು, ಜೆ.ಜಿ.ರಾಜೇಗೌಡ ಪಾಲ್ಗೊಂಡಿದ್ದರು .

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *