ಅಂಚೆ ಮತದಾನ ಗೌಪ್ಯತೆ ಕಾಪಾಡುವುದು ಮುಖ್ಯ ತನ್ಮಯ್ ಚಕ್ರಭರ್ತಿ

ಅಂಚೆ ಮತದಾನ ಗೌಪ್ಯತೆ ಕಾಪಾಡುವುದು ಮುಖ್ಯ ತನ್ಮಯ್ ಚಕ್ರಭರ್ತಿ

ಅಂಚೆ ಮತದಾನ ಗೌಪ್ಯತೆ ಕಾಪಾಡುವುದು ಮುಖ್ಯ ತನ್ಮಯ್ ಚಕ್ರಭರ್ತಿ

ಮಂಡ್ಯ,ಮೇ,01:-ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆ ಮನೆಯಿಂದಲೇ ಮತ ಚಲಾಯಿಸಲು ಅನುಮತಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆಯನ್ನು ಮೇ 3, 4 ಹಾಗೂ 5 ರಂದು ಮಾಡಲಾಗಿದೆ. ಚುನಾವಣೆಗೆ ನಿಯೋಜಿಸಿರುವ ಸಿಬ್ಬಂದಿಗಳು ಮತದಾರರು ಮತ ಚಲಾಯಿಸುವಾಗ ಗೌಪ್ಯತೆಗೆ ಆದ್ಯತೆ ನೀಡಬೇಕು ಎಂದು ಮಂಡ್ಯ ಮತ್ತು ನಾಗಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ತನ್ಮಯ್ ಚಕ್ರಭರ್ತಿ ಅವರು ತಿಳಿಸಿದರು.

ಅವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಕುರಿತಂತೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮತದಾನ ಮನೆಯಲ್ಲಿ ನಡೆಯುವುದರಿಂದ ಮತದಾನ ಮಾಡಲು ತಾವು ವ್ಯವಸ್ಥೆ ಮಾಡುವ ಕಂಪಾರ್ಟ್‍ಮೆಂಟ್‍ನಲ್ಲಿ ಬೆಳಕು ಇಲ್ಲ, ವಯಸ್ಸಾಗಿದೆ ಸಹಯಕರು ಬೇಕು ಈ ರೀತಿ ಸಮಸ್ಯೆಗಳು ಬರುತ್ತದೆ. ಇವುಗಳಿಗೆ ವಿಚಲಿತರಾಗದೇ ಚುನಾವಣಾ ಆಯೋಗ ನೀಡಿರುವ ಸೂಚನೆಗಳನ್ನು ಪಾಲಿಸಿ. ಮತದಾನದ ಗೌಪ್ಯತೆ ಕಪಾಡಿ ತಮ್ಮೊಂದಿಗೆ ಪೊಲೀಸ್ ಇಲಾಖೆ ಸಿಬ್ಬಂದಿಗಳು ಇರುತ್ತಾರೆ. ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 2630 ಮತದಾರರು ಹಾಗೂ 778 ವಿಕಲಚೇತನರು ಮನೆಯಿಂದಲೇ ಮತದಾನ ಮಾಡಲು ಒಪ್ಪಿಗೆ ನೀಡಿದ್ದಾರೆ. ಮತದಾನಕ್ಕಾಗಿ 59 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡದಲ್ಲಿ ಇಬ್ಬರೂ ಪೋಲಿಂಗ್ ಅಧಿಕಾರಿ, ಒಬ್ಬರೂ ಮೈಕ್ರೋ ಅಬ್‍ಸರ್‍ವರ್, ಒಬ್ಬರೂ ಪೊಲೀಸ್ ಹಾಗೂ ಒಬ್ಬರೂ ವಿಡಿಯೋ ಗ್ರಾಫರ್ ಇರುತ್ತಾರೆ. ಮತದಾನ ಪ್ರಕ್ರಿಯೆ ಬೆಳಿಗ್ಗೆ 9 ರಿಂದ 5 ಗಂಟೆಯವರೆಗೆ ನಡೆಯಲಿದೆ. ಪ್ರತಿದಿನ ಪ್ರಕ್ರಿಯೆ ಮುಗಿದ ನಂತರ ವಿಡಿಯೋಗ್ರಾಫರ್ ಗಳಿಂದ ಅನ್‍ಎಡಿಟೆಡ್ ವಿಡಿಯೋವನ್ನು ಚುನಾವಣಾಧಿಕಾರಿಗಳಿಗೆ ತಲುಪಿಸಬೇಕು ಎಂದರು.

ಮನೆಯಲ್ಲೇ ಮತದಾನ ಮಾಡಲು ಅನುಮತಿ ನೀಡಿರುವ ಮತದಾರರು ಸಿಬ್ಬಂದಿಗಳು ಬಂದ ಸಂದರ್ಭದಲ್ಲಿ ಮತದಾನ ಮಾಡಬೇಕು ಮೇ 10 ರಂದು ಮತದಾನ ಮಾಡಲು ಅವಕಾಶವಿರುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜು, ಚುನಾವಣಾ ಅಧಿಕಾರಿಗಳಾದ ಎಸ್. ಹೆಚ್ ಕೀರ್ತನ, ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಎಂ.ಬಾಬು, ಕೃಷ್ಣಕುಮಾರ್, ನಾಗರಾಜು ಪೋಸ್ಟಲ್ ನೋಡಲ್ ಅಧಿಕಾರಿ ಜಾನ್ಸನ್ ಹಾಗೂ ಇನ್ನಿತರರಿದ್ದರು.

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *