ಭಜರಂಗದಳ ನಿಷೇಧ ಪ್ರಸ್ತಾವನೆ…ಹನುಮಾನ್ ಚಾಲೀಸ ಪಠಿಸುವ ಮೂಲಕ ವಿರೋಧ…

ಭಜರಂಗದಳ ನಿಷೇಧ ಪ್ರಸ್ತಾವನೆ…ಹನುಮಾನ್ ಚಾಲೀಸ ಪಠಿಸುವ ಮೂಲಕ ವಿರೋಧ…

  • Temples
  • May 5, 2023
  • No Comment
  • 142

ಮೈಸೂರು,ಮೇ5,Tv10 ಕನ್ನಡ
ಭಜರಂಗದಳ ಸಂಘಟನೆ ನಿಷೇಧಿಸುವ ಪ್ರಸ್ತಾಪಕ್ಕೆ ಹಿಂದೂಪರ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮಾಡಿರುವ ಘೋಷಣೆಯನ್ನ ಖಂಡಿಸಿ ಮೈಸೂರಿನ ಹಿಂದೂ ಪರ ಸಂಘಟನೆಗಳು ಹನುಮಾನ್ ಚಾಲೀಸ ಪಠಿಸುವ ಮೂಲಕ ವಿರೋಧಿಸಿವೆ.ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಡಿ ದೇವರಾಜ ಅರಸು ರಸ್ತೆಯಲ್ಲಿರುವ ತ್ರಿಪುರ ಬೈರವಿ ಮಠದ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ಹನುಮಾನ್ ಚಾಲೀಸಾ ಪಠಣೆ ಮಾಡಲಾಗಿದೆ.
ಇದೇ ರೀತಿ ರಾಜ್ಯಾದ್ಯಂತ ಕಾರ್ಯಕ್ರಮ ಹಮ್ಮಿಕೊಳ್ಳಲು ಬಜರಂಗದಳ ಕರೆ ನೀಡಿತ್ತು. ತ್ರಿಪುರ ಭೈರವಿ ಮಠದ ಶ್ರೀ ಕೃಷ್ಣ ಮೋಹನಾನಂದ ಗಿರಿ ಗೋಸ್ವಾಮಿಜಿಯವರು ಸಾನಿಧ್ಯ ವಹಿಸಿದ್ದರು.
ಸತತವಾಗಿ ಒಂದು ಗಂಟೆ ಹನುಮಾನ್ ಚಾಲೀಸಾ ಪಠಿಸಲಾಯಿತು. ನಾನು ಭಜರಂಗಿ ಎಂಬ ಘೋಷಣೆಯನ್ನು ಮೊಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮೈಸೂರು ರಕ್ಷಣಾ ವೇದಿಕೆ, ಮೈಸೂರು ಹನುಮಂತೊತ್ಸವ ಸಮಿತಿ, ಶ್ರೀರಾಮ ಸೇನೆ, ಯುವ ಬ್ರಿಗೇಡ್, ವಿಶ್ವ ಹಿಂದೂ ಪರಿಷತ್, ವೀರ ಸಾವರ್ಕರ್ ಯುವ ಬಳಗ, ರಾಜಸ್ತಾನ್ ಮಾರ್ವಾಡಿ ಸಂಘ, ಪ್ರಶಾಂತ್ ಗೌಡ ಸ್ನೇಹ ಬಳಗ, ಹಿಂದೂ ಹೆಜ್ಜೆ ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಿದ್ದವು.
ಹಿಂದೂಪರ ಸಂಘಟನೆಗಳ ಒಕ್ಕೂಟದ ಸಂಚಾಲಕರಾದ ಮೈಕಾ ಪ್ರೇಮ್ ಕುಮಾರ್, ಸಹ ಸಂಚಾಲಕರಾದ ಸಂಜಯ್, ರಾಕೇಶ್ ಭಟ್, ಮುಖಂಡರಾದ ಬಿ.ಎಸ್. ಪ್ರಶಾಂತ್, ಪ್ರಶಾಂತ್ ಗೌಡ, ಜೀವನ್, ವಿಕ್ರಂ ಅಯ್ಯಂಗಾರ್, ಜಗದೀಶ್ ಹೆಬ್ಬಾರ್, ಅನುಜ್ ಸರಸ್ವತ್, ಪ್ರದಿಶ್, ಜಯಸಿಂಹ, ಸಂದೇಶ ಪವಾರ್, ಪ್ರತಾಪ್ ದಟ್ಟಗಳ್ಳಿ, ಶ್ರೀನಿವಾಸ್ ಪ್ರಸಾದ್, ಹರೀಶ್ ಗೌಡ, VPF ಸುಧೀಂದ್ರ, ಮಲಮ್ ಸಿಂಗ್, ಗಿರೀಶ್, ಮಹೇಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *