ಪ್ರೀತಿಸಿ ಮದುವೆಯಾದ ಹುಡುಗಿ ನೇಣಿಗೆ…ವರದಕ್ಷಿಣೆ ಕಿರುಕುಳ ಆರೋಪ…ಗಂಡ,ಅತ್ತೆ,ಮಾವ ಅಂದರ್…

ಪ್ರೀತಿಸಿ ಮದುವೆಯಾದ ಹುಡುಗಿ ನೇಣಿಗೆ…ವರದಕ್ಷಿಣೆ ಕಿರುಕುಳ ಆರೋಪ…ಗಂಡ,ಅತ್ತೆ,ಮಾವ ಅಂದರ್…

ಸಾಲಿಗ್ರಾಮ,ಮೇ8,Tv10 ಕನ್ನಡ
ಪ್ರೀತಿಸಿ ಮದುವೆಯಾದ ಹುಡುಗಿ ಮೂರು ವರ್ಷಕ್ಕೇ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮದ ಮಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ದೀಪಿಕಾ(21) ಮೃತ ದುರ್ದೈವಿ.ವರದಕ್ಷಿಣೆ ಕಿರುಕುಳ ಆರೋಪದ ಹಿನ್ನಲೆ ಗಂಡ ನಾಗರಾಜ್,ಮಾವ ತಮ್ಮಯ್ಯ,ಅತ್ತೆ ಪೊಲೀಸರ ಅತಿಥಿಯಾಗಿದ್ದಾರೆ.ದೀಪಿಕಾ ಹಾಗೂ ನಾಗರಾಜ್ ದೂರದ ಸಂಭಂಧವಾಗಿದ್ದರೂ ವರಸೆಯಲ್ಲಿ ಅಣ್ಣತಂಗಿ ಆಗಬೇಕು.ಹೀಗಿದ್ದೂ ಇಬ್ಬರು ಪ್ರೀತಿಸಿದ್ದಾರೆ.ವರಸೆಯಲ್ಲಿ ಅಣ್ಣತಂಗಿ ಆದ ಕಾರಣ ಎರಡು ಮನೆಯವರಲ್ಲೂ ಮದುವೆಗೆ ವಿರೋದ ವ್ಯಕ್ತವಾಗಿದೆ.ಮನೆಯವರ ವಿರೋಧ ಲೆಕ್ಕಿಸದ ಲವರ್ಸ್ ಮೂರು ವರ್ಷಗಳ ಹಿಂದೆ ಎಸ್ಕೇಪ್ ಆಗಿ ಮದುವೆ ಆಗಿದ್ದಾರೆ.ಎರಡು ವರ್ಷಗಳ ಕಾಲ ಕೆ.ಆರ್.ನಗರದ ಗ್ರಾಮವೊಂದರಲ್ಲಿ ನೆಲೆಸಿದ್ದು ಒಂದು ವರ್ಷದ ಹಿಂದೆ ಮಲುಗನಹಳ್ಳಿ ಗ್ರಾಮಕ್ಕೆ ಬಂದಿದ್ದಾರೆ.ನಾಗರಾಜ್ ಹಾಗೂ ಪೋಷಕರು ದೀಪಿಕಾಗೆ ವರದಕ್ಷಿಣೆಗಾಗಿ ಕಿರುಕುಳ ಕೊಟ್ಟಿದ್ದಾರೆ.ಬೇಸತ್ತ ದೀಪಿಕ ನೇಣಿಗೆ ಶರಣಾಗಿದ್ದಾಳೆ.ದೀಪಿಕಾ ಸಾವಿಗೆ ವರದಕ್ಷಿಣೆ ಕಿರುಕುಳ ಕಾರಣವೆಂದು ಆರೋಪಿಸಿ ದೀಪಿಕಾ ಪೋಷಕರು ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಧ್ಯ ಪತಿ ನಾಗರಾಜ್,ಮಾವ ತಮ್ಮಯ್ಯ,ಅತ್ತೆ ಜಯಮ್ಮ ಪೊಲೀಸರ ಅತಿಥಿಯಾಗಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *