ಮತದಾನಕ್ಕೆ ಕ್ಷಣಗಣನೆ…48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ…

ಮತದಾನಕ್ಕೆ ಕ್ಷಣಗಣನೆ…48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ…

ಮೈಸೂರು,ಮೇ9,Tv10 ಕನ್ನಡ
ಕರ್ನಾಟಕ ವಿಧಾನಸಭಾ ಚುನಾವಾಣೆಗೆ ಮೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 08ರ ಸಾಯಂಕಾಲ 6 ಗಂಟೆಯಿಂದ ಮೇ 10ರ ಸಾಯಂಕಾಲ 6.30 ರವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಮಾಧ್ಯಮಗಳು, ಟಿ.ವಿ. ವಾಹಿನಿಗಳಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 125 ರಂತೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ: ರಾಜೇಂದ್ರ ಕೆ.ವಿ. ಅವರು ತಿಳಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು, ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.
ಎಕ್ಸಿಟ್ ಪೋಲ್‌ ನಿಷೇಧ
ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆ ವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *