ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ…

ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ…

ಮೈಸೂರು,ಮೇ9,Tv10 ಕನ್ನಡ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.ಉತ್ತಮ ಸರ್ಕಾರ ಆಯ್ಕೆ ಮತದಾರರ ಕೈಲಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಕ್ಕು ಚಲಾಯಿಸುವ ಮೂಲಕ ಉತ್ತಮ ಸರ್ಕಾರ ರಚಿಸಲು ಸಾಧ್ಯ.ಈ ಹಿನ್ನಲೆ ಮತದಾನದಲ್ಲಿ ಭಾಗವಹಿಸುವಂತೆ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ವಿಶೇಷವಾಗಿ ಜಾಗೃತಿ ಮೂಡಿಸಲಾಗಿದೆ. ಮತದಾನಕ್ಕೆ ಮದುವೆ ಮಾದರಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ ಸಾರ್ವಜನಿಕರಿಗೆ ಹಾಗೂ ಮನೆಮನೆಗೆ ತೆರಳಿ ಆಹ್ವಾನ ಪತ್ರಿಕೆ ತಲುಪಿಸುವ ಮೂಲಕ ಮತದಾನಕ್ಕೆ ಜಾಗೃತಿ ಮೂಡಿಸಿದ್ದಾರೆ.
ಭಾರತ ಸರ್ಕಾರ ಹೆಸರಿನಲ್ಲಿ ಈ ಚುನಾವಣೆ ಆಯೋಗದ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ.ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿ ವಾಹನ ಶಕ 1945 ಸರಿಯಾದ ಶ್ರೀಶೋಭಕೃತ್ ನಾಮಸಂವತ್ಸರ ದಿನಾಂಕ 10.5.2023 ರ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಲ್ಲುವ ಶುಭ ಗಳಿಗೆಯಲ್ಲಿ ಮತದಾನ ಚುನಾವಣೆಯೋತ್ಸವ ನೆರವೇರುವಂತೆ ಭಾರತ ಸರ್ಕಾರ ನಿಶ್ಚಯಿಸಿರುವುದರಿಂದತಾವು ಸಕುಟುಂಬ ಸಮೇತರಾಗಿ ಆಗಮಿಸಿ ತಮ್ಮ ಸ್ವ ಇಚ್ಛೆಯಂತೆ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಭಾರತದ ಭವಿಷ್ಯವನ್ನು ರೂಪಿಸಬೇಕೆಂದು ಕೋರುವ ತಮ್ಮ ಆಗಮನಾಭಿಲಾಷಿಗಳು. ಭಾರತ ಚುನಾವಣೆ ಆಯೋಗ ಸ್ಥಳ ತಮ್ಮ ತಮ್ಮ ಮತಗಟ್ಟೆ ಕೇಂದ್ರ ಎಂದು ಆಹ್ವಾನ ಕೊರಲಾಗಿದೆ.ವಿಶೇಷ ಸೂಚನೆಯಾಗಿ ದಯವಿಟ್ಟು ಉಡುಗೊರೆ ಕೊಡಬೇಡಿ ಮತ್ತು ಪಡೆಯಬೇಡಿ ಬಲಿಷ್ಠ ಭಾರತ ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ.ಹಣ ಕೇಳದೆ ಮತನೀಡಿ ಆಶೀರ್ವದಿಸಿ ಎಂದು ಮುದ್ರಿಸಲಾಗಿದೆ. ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ವಿಶೇಷವಾಗಿ ಮತದಾನ ಜಾಗೃತಿ ಮೂಡಿಸಲಾಗಿದೆ.

ಇದೇ ಸಂದರ್ಭದಲ್ಲಿ ಕೆ ಎಂ ಪಿ ಕೆ ಚರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಎಸ್ ಎನ್ ರಾಜೇಶ್,ಆನಂದ್, ಆದರ್ಶ್, ಗಿರೀಶ್, ಸುಚೇಂದ್ರ, ಚಕ್ರಪಾಣಿ, ಹಾಗೂ ಭಾಗವಹಿಸಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *