ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ…

ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ…

ಮೈಸೂರು,ಮೇ9,Tv10 ಕನ್ನಡ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.ಉತ್ತಮ ಸರ್ಕಾರ ಆಯ್ಕೆ ಮತದಾರರ ಕೈಲಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಕ್ಕು ಚಲಾಯಿಸುವ ಮೂಲಕ ಉತ್ತಮ ಸರ್ಕಾರ ರಚಿಸಲು ಸಾಧ್ಯ.ಈ ಹಿನ್ನಲೆ ಮತದಾನದಲ್ಲಿ ಭಾಗವಹಿಸುವಂತೆ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ವಿಶೇಷವಾಗಿ ಜಾಗೃತಿ ಮೂಡಿಸಲಾಗಿದೆ. ಮತದಾನಕ್ಕೆ ಮದುವೆ ಮಾದರಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ ಸಾರ್ವಜನಿಕರಿಗೆ ಹಾಗೂ ಮನೆಮನೆಗೆ ತೆರಳಿ ಆಹ್ವಾನ ಪತ್ರಿಕೆ ತಲುಪಿಸುವ ಮೂಲಕ ಮತದಾನಕ್ಕೆ ಜಾಗೃತಿ ಮೂಡಿಸಿದ್ದಾರೆ.
ಭಾರತ ಸರ್ಕಾರ ಹೆಸರಿನಲ್ಲಿ ಈ ಚುನಾವಣೆ ಆಯೋಗದ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ.ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿ ವಾಹನ ಶಕ 1945 ಸರಿಯಾದ ಶ್ರೀಶೋಭಕೃತ್ ನಾಮಸಂವತ್ಸರ ದಿನಾಂಕ 10.5.2023 ರ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಲ್ಲುವ ಶುಭ ಗಳಿಗೆಯಲ್ಲಿ ಮತದಾನ ಚುನಾವಣೆಯೋತ್ಸವ ನೆರವೇರುವಂತೆ ಭಾರತ ಸರ್ಕಾರ ನಿಶ್ಚಯಿಸಿರುವುದರಿಂದತಾವು ಸಕುಟುಂಬ ಸಮೇತರಾಗಿ ಆಗಮಿಸಿ ತಮ್ಮ ಸ್ವ ಇಚ್ಛೆಯಂತೆ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಭಾರತದ ಭವಿಷ್ಯವನ್ನು ರೂಪಿಸಬೇಕೆಂದು ಕೋರುವ ತಮ್ಮ ಆಗಮನಾಭಿಲಾಷಿಗಳು. ಭಾರತ ಚುನಾವಣೆ ಆಯೋಗ ಸ್ಥಳ ತಮ್ಮ ತಮ್ಮ ಮತಗಟ್ಟೆ ಕೇಂದ್ರ ಎಂದು ಆಹ್ವಾನ ಕೊರಲಾಗಿದೆ.ವಿಶೇಷ ಸೂಚನೆಯಾಗಿ ದಯವಿಟ್ಟು ಉಡುಗೊರೆ ಕೊಡಬೇಡಿ ಮತ್ತು ಪಡೆಯಬೇಡಿ ಬಲಿಷ್ಠ ಭಾರತ ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ.ಹಣ ಕೇಳದೆ ಮತನೀಡಿ ಆಶೀರ್ವದಿಸಿ ಎಂದು ಮುದ್ರಿಸಲಾಗಿದೆ. ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ವಿಶೇಷವಾಗಿ ಮತದಾನ ಜಾಗೃತಿ ಮೂಡಿಸಲಾಗಿದೆ.

ಇದೇ ಸಂದರ್ಭದಲ್ಲಿ ಕೆ ಎಂ ಪಿ ಕೆ ಚರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಎಸ್ ಎನ್ ರಾಜೇಶ್,ಆನಂದ್, ಆದರ್ಶ್, ಗಿರೀಶ್, ಸುಚೇಂದ್ರ, ಚಕ್ರಪಾಣಿ, ಹಾಗೂ ಭಾಗವಹಿಸಿದರು…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *