ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

  • Mysore
  • May 9, 2023
  • No Comment
  • 192

ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

ಮೈಸೂರು,ಮೇ9,Tv10 ಕನ್ನಡ
ಮತದಾನದಲ್ಲಿ ಭಾಗವಹಿಸುವಂತೆ ಅರಿವು ಮೀಡಿಸಲು ಚುನಾವಣಾ ಆಯೋಗ ಸಾಕಷ್ಟು ಕಾರ್ಯಕ್ರಮಗಳನ್ನ ಕೊಟ್ಟಿದೆ.ಪ್ರಜಾಪ್ರಭುತ್ವದ ಹಕ್ಕನ್ನ ಚಲಾಯಸಲು ಹಬ್ಬದಂತೆ ಆಚರಿಸಲು ಮನವಿ ಮಾಡಿದೆ.ಚುನಾವಣಾ ಆಯೋಗಕ್ಕೆ ಹಕವು ಸಂಘಸಂಸ್ಥೆಗಳು ಸಾಥ್ ನೀಡಿವೆ.ಮೈಸೂರಿನ ಚಾಮುಂಡಿಪುರಂನಲ್ಲಿರುವ ಹೋಟೆಲ್ ಮಾಲೀಕರು ಮತದಾನ ಉತ್ತೇಜನಕ್ಕಾಗಿ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಿದೆ. ಕೆಫೆ ಗುಡ್ ವೈಬ್ಸ್ ನ ಮಾಲೀಕರು ಮತದಾನ ಮಾಡಿದ ಯುವ ಸಮೂಹಕ್ಕೆ ರಿಯಾಯಿತಿ ಘೋಷಿಸಿದ್ದಾರೆ. ನಾಳೆ ಮತದಾನ ಮಾಡಿದ ಗುರುತು ತೋರಿಸಿದ 18 ರಿಂದ 30 ವರ್ಷದ ಯುವ ತರುಣ ಮತದಾರರು ತಮ್ಮ ಕೆಫೆಯಲ್ಲಿ ಯಾವುದೇ ತಿನಿಸುಗಳು ಸೇವಿಸಿದರೆ ಶೇ 50% ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ. ಪ್ರತಿ ಗ್ರಾಹಕನಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಒಟ್ಟು ಬಿಲ್ಸ್ ನಲ್ಲಿ ಶೇಕಡ 50% ರಿಯಾಯಿತಿ ನೀಡಲಾಗುವುದೆಂದು ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು
ತಪ್ಪದೇ ಮತ ಚಲಾಯಿಸಿ
ಸಮೃದ್ಧ ಭಾರತ ನಿರ್ಮಿಸೋಣ ಎಂದು ಉಲ್ಲೇಖಿಸಿರುವ ಬ್ಯಾನರ್ ವನ್ನು ಕೆಫೆ ಮುಂಬಾಗ ರಾರಾಜಿಸುತ್ತಿದೆ.
ಮತ ಚಲಾಯಿಸಿ ಬಂದವರಿಗೆ ಬಾಯಲ್ಲಿ ನೀರೂರಿಸುವ ವಿವಿಧ ಬಗೆಯ ತಿಂಡಿಗಳನ್ನು ರಿಯಾಯಿತಿಯಲ್ಲಿ ಕೊಡಲು ತಯಾರಿ ನಡೆಸಿದ್ದಾರೆ.
ಈ ಕುರಿತು ಹೋಟೆಲ್ ಮಾಲಿಕರಾದ ಸುರೇಶ್ ರವರು ಮಾತನಾಡಿ ದಿನಸಿ, ತರಕಾರಿ, ಗ್ಯಾಸಸಿಲಿಂಡರ್ ಬೆಲೆ ಗಗನಕ್ಕೇರಿರುವ ಈ ಸಂದರ್ಭದಲ್ಲಿಯೂ ಕೂಡ ನಾವು ಮತದಾನದ ಉತ್ತೇಜನಕ್ಕಾಗಿ ಚುನಾವಣಾ
ಆಯೋಗದೊಂದಿಗೆ ಕೈಜೋಡಿಸಲು ಸಜ್ಜಾಗಿದ್ದೇವೆ. ಮತದಾರರು ಒಂದು ಮತ ಚಲಾಯಿಸಿರುವ ಗುರುತು ತೋರಿಸಿ 50%ರಿಯಾಯಿತಿ ಪಡೆಯಬಹುದೆಂದು ತಿಳಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *