ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

  • Mysore
  • May 9, 2023
  • No Comment
  • 161

ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

ಮೈಸೂರು,ಮೇ9,Tv10 ಕನ್ನಡ
ಮತದಾನದಲ್ಲಿ ಭಾಗವಹಿಸುವಂತೆ ಅರಿವು ಮೀಡಿಸಲು ಚುನಾವಣಾ ಆಯೋಗ ಸಾಕಷ್ಟು ಕಾರ್ಯಕ್ರಮಗಳನ್ನ ಕೊಟ್ಟಿದೆ.ಪ್ರಜಾಪ್ರಭುತ್ವದ ಹಕ್ಕನ್ನ ಚಲಾಯಸಲು ಹಬ್ಬದಂತೆ ಆಚರಿಸಲು ಮನವಿ ಮಾಡಿದೆ.ಚುನಾವಣಾ ಆಯೋಗಕ್ಕೆ ಹಕವು ಸಂಘಸಂಸ್ಥೆಗಳು ಸಾಥ್ ನೀಡಿವೆ.ಮೈಸೂರಿನ ಚಾಮುಂಡಿಪುರಂನಲ್ಲಿರುವ ಹೋಟೆಲ್ ಮಾಲೀಕರು ಮತದಾನ ಉತ್ತೇಜನಕ್ಕಾಗಿ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಿದೆ. ಕೆಫೆ ಗುಡ್ ವೈಬ್ಸ್ ನ ಮಾಲೀಕರು ಮತದಾನ ಮಾಡಿದ ಯುವ ಸಮೂಹಕ್ಕೆ ರಿಯಾಯಿತಿ ಘೋಷಿಸಿದ್ದಾರೆ. ನಾಳೆ ಮತದಾನ ಮಾಡಿದ ಗುರುತು ತೋರಿಸಿದ 18 ರಿಂದ 30 ವರ್ಷದ ಯುವ ತರುಣ ಮತದಾರರು ತಮ್ಮ ಕೆಫೆಯಲ್ಲಿ ಯಾವುದೇ ತಿನಿಸುಗಳು ಸೇವಿಸಿದರೆ ಶೇ 50% ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ. ಪ್ರತಿ ಗ್ರಾಹಕನಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಒಟ್ಟು ಬಿಲ್ಸ್ ನಲ್ಲಿ ಶೇಕಡ 50% ರಿಯಾಯಿತಿ ನೀಡಲಾಗುವುದೆಂದು ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು
ತಪ್ಪದೇ ಮತ ಚಲಾಯಿಸಿ
ಸಮೃದ್ಧ ಭಾರತ ನಿರ್ಮಿಸೋಣ ಎಂದು ಉಲ್ಲೇಖಿಸಿರುವ ಬ್ಯಾನರ್ ವನ್ನು ಕೆಫೆ ಮುಂಬಾಗ ರಾರಾಜಿಸುತ್ತಿದೆ.
ಮತ ಚಲಾಯಿಸಿ ಬಂದವರಿಗೆ ಬಾಯಲ್ಲಿ ನೀರೂರಿಸುವ ವಿವಿಧ ಬಗೆಯ ತಿಂಡಿಗಳನ್ನು ರಿಯಾಯಿತಿಯಲ್ಲಿ ಕೊಡಲು ತಯಾರಿ ನಡೆಸಿದ್ದಾರೆ.
ಈ ಕುರಿತು ಹೋಟೆಲ್ ಮಾಲಿಕರಾದ ಸುರೇಶ್ ರವರು ಮಾತನಾಡಿ ದಿನಸಿ, ತರಕಾರಿ, ಗ್ಯಾಸಸಿಲಿಂಡರ್ ಬೆಲೆ ಗಗನಕ್ಕೇರಿರುವ ಈ ಸಂದರ್ಭದಲ್ಲಿಯೂ ಕೂಡ ನಾವು ಮತದಾನದ ಉತ್ತೇಜನಕ್ಕಾಗಿ ಚುನಾವಣಾ
ಆಯೋಗದೊಂದಿಗೆ ಕೈಜೋಡಿಸಲು ಸಜ್ಜಾಗಿದ್ದೇವೆ. ಮತದಾರರು ಒಂದು ಮತ ಚಲಾಯಿಸಿರುವ ಗುರುತು ತೋರಿಸಿ 50%ರಿಯಾಯಿತಿ ಪಡೆಯಬಹುದೆಂದು ತಿಳಿಸಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *