ಮದುವೆ ಆಗಿಲ್ಲವೆಂದು ಹಂಗಿಸಿದ ಸ್ನೇಹಿತ ಕೊಲೆ…5 ತಿಂಗಳಾದ್ರೂ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿರುವ ಆರೋಪಿ…ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸಿರುವ ಕುಟುಂಬ…ಸಾಥ್ ನೀಡಿದ ಗ್ರಾಮಸ್ಥರು…

ಹುಣಸೂರು,ಮೇ17,Tv10 ಕನ್ನಡ
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನ ಕೊಲೆ ಮಾಡಿದ ಆರೋಪಿ 5 ತಿಂಗಳಾದರೂ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದಾನೆ.ಕೊಲೆ ಆರೋಪಿಯನ್ನ ಅರೆಸ್ಟ್ ಮಾಡದ ಪೊಲೀಸರ ವಿರುದ್ದ ಕುಟುಂಬಸ್ಥರು ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ಆರೋಪಿಯನ್ನ ಬಂಧಿಸಿ ಕಾನೂನು ಕ್ರಮ ಜರುಗಿಸದಿದ್ದಲ್ಲಿ ಪೊಲೀಸ್ ಠಾಣೆ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.ಕುಟುಂಬಸ್ಥರಿಗೆ ಗ್ರಾಮಸ್ಥರೂ ಸಹ ಸಾಥ್ ನೀಡಿದ್ದಾರೆ.ಹುಣಸೂರು ತಾಲೂಕು ಹರವೆ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.

ಸಣ್ಣಸ್ವಾಮಿ ನಾಯಕ ಕೊಲೆಯಾದ ಆರೋಪಿ.ಕುಮಾರ್@ಬಂಗಾರಿ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿ.8-1-23 ರಂದು ಘಟನೆ ನಡೆದಿದೆ.ಸಣ್ಣಸ್ವಾಮಿ ನಾಯಕ ಹಾಗೂ ಬಂಗಾರಿ ಪರಿಚಯಸ್ಥರು.ಹರವೇ ಗ್ರಾಮದ ನಿವಾಸಿಗಳು.ಕುಮಾರ್@ಬಂಗಾರಿಗೆ ಮದುವೆ ಆಗಿಲ್ಲ.ಈ ವಿಚಾರದಲ್ಲಿ ಸಣ್ಣಸ್ವಾಮಿ ನಾಯಕ ಆಗಾಗ ಹಂಗಿಸುತ್ತಿದ್ದ.ಇದೇ ವಿಚಾರದಲ್ಲಿ ಇಬ್ಬರ ನಡುವೆ ಆಗಾಗ ಜಗಳ ಆಗುತ್ತಿತ್ತು.ಜನವರಿ 8 ರಂದು ಕುಡಿದ ಮತ್ತಿನಲ್ಲಿದ್ದ ಇಬ್ಬರೂ ಇದೇ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.ಈ ವೇಳೆ ಕುಮಾರ್ ಚಾಕುವಿನಿಂದ ಸಣ್ಣಸ್ವಾಮಿಗೆ ಇರಿದಿದ್ದಾನೆ.ಗಾಯಗೊಂಎ ಸಣ್ಣಸ್ವಾಮಿ ನಾಯಕನನ್ನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ.ಕೊಲೆ ಮಾಡಿದ ಕುಮಾರ್ ತಲೆ ಮರೆಸಿಕೊಂಡಿದ್ದಾನೆ.ಘಟನೆ ನಡೆದು 5 ತಿಂಗಳಾದ್ರೂ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಪೊಲೀಸರು ವಿಫಲರಾಗಿದ್ದಾರೆ.ಸಣ್ಣಸ್ವಾಮಿ ನಾಯಕನ ಕುಟುಂಬಕ್ಕೂ ಜೀವಬೆದರಿಕೆ ಇದೆ ಎಂದು ಆರೋಪಿಸುತ್ತಿರುವ ಗ್ರಾಮಸ್ಥರು ಕೂಡಲೇ ಹಂತಕನನ್ನ ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.ಆರೋಪಿಯನ್ನ ಬಂಧಿಸದಿದ್ದಲ್ಲಿ ಪೊಲೀಸ್ ಠಾಣೆ ಮುಂಭಾಗ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.ಕೊಲೆ ಆರೋಪಿ ಕುಮಾರ್ ರಾಜಾರೋಷವಾಗಿ ತಿರುಗಾಡುತ್ತಿದ್ದಾನೆಂಬ ಮಾಹಿತಿ ಕೇಳಿಬರುತ್ತಿದೆ.ಇನ್ನಾದರೂ ಹುಣಸೂರು ಠಾಣೆ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಯನ್ನ ಬಂಧಿಸಿ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *