ವಿವಿಧ ಮಾದರಿಯ 130 ಮೊಬೈಲ್ ಫೋನ್ ವಶ: ಎನ್ ಯತೀಶ್

ವಿವಿಧ ಮಾದರಿಯ 130 ಮೊಬೈಲ್ ಫೋನ್ ವಶ: ಎನ್ ಯತೀಶ್

ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೆಂಟ್ರಲ್ ಎಕ್ಯುಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ ತಂತ್ರಾಂಶದ ಸಹಾಯದಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ಕಳ್ಳತನ/ಕಾಣೆಯಾಗಿದ್ದ ರೂ.23,00,000/- ಬೆಲೆ ಬಾಳುವ ವಿವಿಧ ಮಾದರಿಯ 130 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ತಿಳಿಸಿದ್ದಾರೆ.

ಅವರು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಸಾರ್ವಜನಿಕರು ಕಳೆದುಕೊಂಡಿದ್ದ ವಿವಿಧ ಮಾದರಿಯ ಮೊಬೈಲ್ ಪೋನ್ ಗಳನ್ನು ದೂರುದಾರರಿಗೆ ಹಿಂದಿರುಗಿಸಲಾಗಿದೆ ಎಂದರು.

ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ ಕಳೆದುಹೋದಲ್ಲಿ ಸಿ.ಇ.ಎನ್ ಪೋರ್ಟಲ್ ನ್ನು ಬಳಸಿಕೊಂಡು, ನಿಮ್ಮ ಮೊಬೈಲ್‌ ನ ಐ.ಎಂ.ಎ ನಂಬರ್ ತೆಗೆದುಕೊಂಡು ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿ, ದೂರಿನ ಪ್ರತಿಯನ್ನು ಪಡೆದು www.ceir.gov.in ನಲ್ಲಿ ಲಾಗಿನ್ ಆಗಿ ದೂರನ್ನು ದಾಖಲಿಸಿ ಎಂದರು.

ಮಂಡ್ಯ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ/ ಕಾಣೆಯಾಗಿದ್ದ ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡುವ ಸಂಬಂಧವಾಗಿ ಮಂಡ್ಯ ಜಿಲ್ಲಾ ಅಪರ ಪೊಲೀಸ್ ಅಧೀಕ್ಷಕರಾದ ಸಿ.ಇ ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಎನ್. ಜಯಕುಮಾರ್ ನೇತೃತ್ವದಲ್ಲಿ ಪಿ.ಎಸ್.ಐ ರಾಘವೇಂದ್ರ ಎಂ ಕಠಾರಿ, ರಸೂಲಸಾಬ ಎಂ ಗೌಂಡಿ ಹಾಗೂ ಸಿಬ್ಬಂದಿಗಳಾದ ಎ.ಎಂ ರಾಜೇಅರಸ್, ಎಸ್. ಗಿರೀಶ್, ಹೆಚ್.ಆರ್ ಸುಮನ್ ಅವರು ಒಳಗೊಂಡಂತೆ ಅಧಿಕಾರಿಯವರ ತಂಡ ರಚನೆ ಮಾಡಲಾಗಿತ್ತು.

ಮಂಡ್ಯ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಕಾರ್ಯವನ್ನು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿ ಪ್ರಶಂಸಿರುತ್ತಾರೆ.

Spread the love

Related post

ರಸ್ತೆ ಅಗಲೀಕರಣಕ್ಕೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಸೂಕ್ತ ಕ್ರಮ ಕೈಗೊಳ್ಳುವಂತೆ ಮುಡಾದಿಂದ ಪಾಲಿಕೆಗೆ ಪತ್ರ…

ರಸ್ತೆ ಅಗಲೀಕರಣಕ್ಕೆ ಮೀಸಲಾದ ಜಾಗದಲ್ಲಿ ಅಕ್ರಮ ಕಟ್ಟಡ…ಸೂಕ್ತ ಕ್ರಮ ಕೈಗೊಳ್ಳುವಂತೆ ಮುಡಾದಿಂದ…

ಮೈಸೂರು,ಮೇ21,Tv10 ಕನ್ನಡ ಸಿಎ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಿರಿಸಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿರುವುದನ್ನ ಮುಡಾ ವಲಯ ಅಧಿಕಾರಿಗಳು ಪತ್ತೆ ಹಚ್ಚಿದ್ದು ತುರ್ತಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ…
ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ…

ಕೆ.ಆರ್.ಎಸ್,ಮೇ20,Tv10 ಕನ್ನಡ ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ…
ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ…

ಹುಣಸೂರು,ಮೇ20,Tv10 ಕನ್ನಡ ಅಕ್ರಮವಾಗಿ ಗಂಧದ ಮರದ ತುಂಡುಗಳನ್ನ ಸಂಗ್ರಹಿಸಿದ್ದ ಓರ್ವ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಠಾಣಾ ವ್ಯಾಪ್ತಿಯ ಮಂಗಳೂರು ಮಾಳ ಹಾಡಿಯ ನಿವಾಸಿ ಶಿವನಂಜ…

Leave a Reply

Your email address will not be published. Required fields are marked *