ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್…

ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್…

ಮೈಸೂರು,ಮೇ21,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ರೂಪಿಸಿದ ಹಳೇ ವಸ್ತುಗಳ ಮರು ಬಳಕೆಯ ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ ಯಶಸ್ಸಿಗೆ ಮೈಸೂರಿನ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್‌ ಕೈ ಜೋಡಿಸಿದೆ. ಅನುಪಯುಕ್ತ ವಸ್ತುಗಳ ಮರುಬಳಕೆಯ ಯೋಜನೆ ಇದಾಗಿದೆ.
ಮರುಬಳಕೆಗೆ ಉಪಯೋಗವಾಗುವ ಹಳೇ ವಸ್ತುಗಳನ್ನ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್ ರವರಿಗೆ ಹಸ್ತಾಂತರಿಸುವ ಮೂಲಕ ವಿಶೇಷ ಅಭಿಯಾನಕ್ಕೆ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಕೈ ಜೋಡಿಸಿದೆ.
ಮೇ 20 ರಿಂದ ಜೂನ್ 5ರ ವರೆಗೆ ಹಳೆ ವಸ್ತುಗಳನ್ನ ಸಂಗ್ರಹಿಸಲಾಗುತ್ತದೆ. ಹಳೆಯ ಬಟ್ಟೆ , ನ್ಯೂಸ್ ಪೇಪರ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಟ್ರಸ್ಟ್ ನ ವತಿಯಿಂದ ಪಾಲಿಕೆಗೆ ಹಸ್ತಾಂತರಿಸಲಾಗಿದೆ.
ಈ ಸಂದರ್ಭದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜು ಮಾತನಾಡಿ, ನಗರದಾದ್ಯಂತ ಪಾಲಿಕೆ 9 ವಲಯಗಳಲ್ಲಿ ಒಟ್ಟು 27 ಕಡೆಗಳಲ್ಲಿ ವಸ್ತುಗಳನ್ನು ಸಂಗ್ರಹಿಸುವ ಕೇಂದ್ರಗಳನ್ನು ತೆರೆದಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಹಳೆ ಬಟ್ಟೆ, ಓದಿದ ಪುಸ್ತಕಗಳು, ಹಳೆಯ ಆಟಿಕೆಗಳು, ಹಳೆಯ ಬೈಸಿಕಲ್, ಹಳೆಯ ನ್ಯೂಸ್ ಪೇಪರ್‌ಗಳನ್ನು ನೀಡಿದರೆ ಅದನ್ನು ಪಾಲಿಕೆ ಸ್ವೀಕರಿಸುತ್ತದೆ. ಇಲ್ಲವೇ ನಿತ್ಯವೂ ಬೆಳಗಿನ ವೇಳೆ ಕಸ ಸಂಗ್ರಹಣೆಗೆ ಬರುವ ವಾಹನಗಳಿಗೂ ಈ ವಸ್ತುಗಳನ್ನು ನೀಡಬಹುದಾಗಿದೆ. ನಾಗರಿಕರು ಈ ಉಪಯುಕ್ತ ಯೋಜನೆಯನ್ನು ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಈ ಯೋಜನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನೀಡಿದರೆ ಬಟ್ಟೆಯ ಬ್ಯಾಗ್ ವಿತಗರಿಸಲಾಗುತ್ತದೆ. ಸಂಗ್ರಹವಾದ ಪ್ಲಾಸ್ಟಿಕ್ ಅನ್ನು ಮರು ಬಳಕೆಗೆ ನೀಡಲಾಗುತ್ತದೆ. ಇದೊಂದು ಅತ್ಯುತ್ತಮ ಸೇವಾ ಕಾರ್ಯವಾಗಿದೆ ಎಂದರು.

ಈ ವೇಳೆ ಕೆ.ಎಂ.ಪಿ.ಕೆ.ಟ್ರಸ್ಟ್ ನ ವಿಕ್ರಂ ಅಯ್ಯಂಗಾರ್,
ವಲಯ ಕಚೇರಿಯ ಆರೋಗ್ಯ ನಿರೀಕ್ಷಕಿ ಪ್ರೀತಿ, ಸಂಚಾಲಕರಾದ ಎಸ್ ಎನ್ ರಾಜೇಶ್, ಬೈರತಿ ಲಿಂಗರಾಜು, ಮಂಜುನಾಥ್, ರವಿಚಂದ್ರ, ಹಾಗು ಇನ್ನಿತರರು ಹಾಜರಿದ್ದರು.

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *