ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್…

ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್…

ಮೈಸೂರು,ಮೇ21,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ರೂಪಿಸಿದ ಹಳೇ ವಸ್ತುಗಳ ಮರು ಬಳಕೆಯ ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ ಯಶಸ್ಸಿಗೆ ಮೈಸೂರಿನ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್‌ ಕೈ ಜೋಡಿಸಿದೆ. ಅನುಪಯುಕ್ತ ವಸ್ತುಗಳ ಮರುಬಳಕೆಯ ಯೋಜನೆ ಇದಾಗಿದೆ.
ಮರುಬಳಕೆಗೆ ಉಪಯೋಗವಾಗುವ ಹಳೇ ವಸ್ತುಗಳನ್ನ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್ ರವರಿಗೆ ಹಸ್ತಾಂತರಿಸುವ ಮೂಲಕ ವಿಶೇಷ ಅಭಿಯಾನಕ್ಕೆ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಕೈ ಜೋಡಿಸಿದೆ.
ಮೇ 20 ರಿಂದ ಜೂನ್ 5ರ ವರೆಗೆ ಹಳೆ ವಸ್ತುಗಳನ್ನ ಸಂಗ್ರಹಿಸಲಾಗುತ್ತದೆ. ಹಳೆಯ ಬಟ್ಟೆ , ನ್ಯೂಸ್ ಪೇಪರ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಟ್ರಸ್ಟ್ ನ ವತಿಯಿಂದ ಪಾಲಿಕೆಗೆ ಹಸ್ತಾಂತರಿಸಲಾಗಿದೆ.
ಈ ಸಂದರ್ಭದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜು ಮಾತನಾಡಿ, ನಗರದಾದ್ಯಂತ ಪಾಲಿಕೆ 9 ವಲಯಗಳಲ್ಲಿ ಒಟ್ಟು 27 ಕಡೆಗಳಲ್ಲಿ ವಸ್ತುಗಳನ್ನು ಸಂಗ್ರಹಿಸುವ ಕೇಂದ್ರಗಳನ್ನು ತೆರೆದಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಹಳೆ ಬಟ್ಟೆ, ಓದಿದ ಪುಸ್ತಕಗಳು, ಹಳೆಯ ಆಟಿಕೆಗಳು, ಹಳೆಯ ಬೈಸಿಕಲ್, ಹಳೆಯ ನ್ಯೂಸ್ ಪೇಪರ್‌ಗಳನ್ನು ನೀಡಿದರೆ ಅದನ್ನು ಪಾಲಿಕೆ ಸ್ವೀಕರಿಸುತ್ತದೆ. ಇಲ್ಲವೇ ನಿತ್ಯವೂ ಬೆಳಗಿನ ವೇಳೆ ಕಸ ಸಂಗ್ರಹಣೆಗೆ ಬರುವ ವಾಹನಗಳಿಗೂ ಈ ವಸ್ತುಗಳನ್ನು ನೀಡಬಹುದಾಗಿದೆ. ನಾಗರಿಕರು ಈ ಉಪಯುಕ್ತ ಯೋಜನೆಯನ್ನು ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಈ ಯೋಜನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನೀಡಿದರೆ ಬಟ್ಟೆಯ ಬ್ಯಾಗ್ ವಿತಗರಿಸಲಾಗುತ್ತದೆ. ಸಂಗ್ರಹವಾದ ಪ್ಲಾಸ್ಟಿಕ್ ಅನ್ನು ಮರು ಬಳಕೆಗೆ ನೀಡಲಾಗುತ್ತದೆ. ಇದೊಂದು ಅತ್ಯುತ್ತಮ ಸೇವಾ ಕಾರ್ಯವಾಗಿದೆ ಎಂದರು.

ಈ ವೇಳೆ ಕೆ.ಎಂ.ಪಿ.ಕೆ.ಟ್ರಸ್ಟ್ ನ ವಿಕ್ರಂ ಅಯ್ಯಂಗಾರ್,
ವಲಯ ಕಚೇರಿಯ ಆರೋಗ್ಯ ನಿರೀಕ್ಷಕಿ ಪ್ರೀತಿ, ಸಂಚಾಲಕರಾದ ಎಸ್ ಎನ್ ರಾಜೇಶ್, ಬೈರತಿ ಲಿಂಗರಾಜು, ಮಂಜುನಾಥ್, ರವಿಚಂದ್ರ, ಹಾಗು ಇನ್ನಿತರರು ಹಾಜರಿದ್ದರು.

Spread the love

Related post

ಮತ್ತೆ ಶುರುವಾಯ್ತು ಖಾಸಗಿ ಫೈನಾನ್ಸ್ ಗಳ ಹಾವಳಿ…ಮನೆಗೆ ಬೀಗ ಜಡಿಸ ಸಿಬ್ಬಂದಿ…ಮನೆ ಮಾಲೀಕರ ಪರ ನಿಂತ ರೈತ ಮುಖಂಡರು…

ಮತ್ತೆ ಶುರುವಾಯ್ತು ಖಾಸಗಿ ಫೈನಾನ್ಸ್ ಗಳ ಹಾವಳಿ…ಮನೆಗೆ ಬೀಗ ಜಡಿಸ ಸಿಬ್ಬಂದಿ…ಮನೆ…

ನಂಜನಗೂಡು,ಮೇ8,Tv10 ಕನ್ನಡ ಖಾಸಗಿ ಫೈನಾನ್ಸ್ ಗಳಿಗೆ ಸರ್ಕಾರ ಖಡಕ್ ವಾರ್ನಿಂಗ್ ನೀಡಿದ್ದರೂ ಲೆಕ್ಕಿಸದ ಸಿಬ್ಬಂದಿಗಳು ತಮ್ಮ ದರ್ಪ ಮುಂದುವರೆಸಿದ್ದಾರೆ.ನಂಜನಗೂಡಿನಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮತ್ತೆ ಚಾಲ್ತಿಗೆ ಬಂದಿದೆ.ವಾಸದ…
ಮೖಸೂರಿನಲ್ಲಿ ಯುವಕನ ಕೊಲೆ…5 ಮಂದಿಯ ತಂಡದಿಂದ ಕೃತ್ಯ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…

ಮೖಸೂರಿನಲ್ಲಿ ಯುವಕನ ಕೊಲೆ…5 ಮಂದಿಯ ತಂಡದಿಂದ ಕೃತ್ಯ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…

ಮೈಸೂರಿನಲ್ಲಿ ಯುವಕನ ಬರ್ಬರ ಕೊಲೆಯಾಗಿದೆ.ವರುಣ ಗ್ರಾಮದ ಹೊರವಲಯದ ಹೋಟೆಲ್ ಬಳಿ ಕೃತ್ಯ ನಡೆದಿದೆ.ಕಾರ್ತಿಕ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಕಾರ್ತಿಕ್ ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ.ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ…
ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ…ಕಿರುಚಿತ್ರ,ಸಾಕ್ಷ್ಯಚಿತ್ರಗಳಿಗೆ ಆಹ್ವಾನ…

ಮೈಸೂರು ಸಿನಿಮಾ ಸೊಸೈಟಿಯ ಅಂತರಾಷ್ಟ್ರೀಯ ಚಿತ್ರೋತ್ಸವದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್…

ಮೈಸೂರು,ಏ28,Tv10 ಕನ್ನಡ ಮೈಸೂರು ಸಿನಿಮಾ ಸೊಸೈಟಿಯ ಪ್ರಮುಖ ಚಿತ್ರೋತ್ಸವವಾದ ಪರಿದೃಶ್ಯ ನಾಲ್ಕನೇ ಆವೃತ್ತಿಯ ಬ್ರೋಷರ್ ಬಿಡುಗಡೆ ಮಾಡಲಾಯಿತು. 6/02/2026 ರಿಂದ 8/02/2026 ವರೆಗೆ ನಡೆಯುವ ಚಿತ್ರೋತ್ಸವವನ್ನ ವಿದ್ಯಾರ್ಥಿ ಮತ್ತು…

Leave a Reply

Your email address will not be published. Required fields are marked *