ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್…

ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್…

ಮೈಸೂರು,ಮೇ21,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ರೂಪಿಸಿದ ಹಳೇ ವಸ್ತುಗಳ ಮರು ಬಳಕೆಯ ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ ಯಶಸ್ಸಿಗೆ ಮೈಸೂರಿನ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್‌ ಕೈ ಜೋಡಿಸಿದೆ. ಅನುಪಯುಕ್ತ ವಸ್ತುಗಳ ಮರುಬಳಕೆಯ ಯೋಜನೆ ಇದಾಗಿದೆ.
ಮರುಬಳಕೆಗೆ ಉಪಯೋಗವಾಗುವ ಹಳೇ ವಸ್ತುಗಳನ್ನ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್ ರವರಿಗೆ ಹಸ್ತಾಂತರಿಸುವ ಮೂಲಕ ವಿಶೇಷ ಅಭಿಯಾನಕ್ಕೆ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಕೈ ಜೋಡಿಸಿದೆ.
ಮೇ 20 ರಿಂದ ಜೂನ್ 5ರ ವರೆಗೆ ಹಳೆ ವಸ್ತುಗಳನ್ನ ಸಂಗ್ರಹಿಸಲಾಗುತ್ತದೆ. ಹಳೆಯ ಬಟ್ಟೆ , ನ್ಯೂಸ್ ಪೇಪರ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಟ್ರಸ್ಟ್ ನ ವತಿಯಿಂದ ಪಾಲಿಕೆಗೆ ಹಸ್ತಾಂತರಿಸಲಾಗಿದೆ.
ಈ ಸಂದರ್ಭದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜು ಮಾತನಾಡಿ, ನಗರದಾದ್ಯಂತ ಪಾಲಿಕೆ 9 ವಲಯಗಳಲ್ಲಿ ಒಟ್ಟು 27 ಕಡೆಗಳಲ್ಲಿ ವಸ್ತುಗಳನ್ನು ಸಂಗ್ರಹಿಸುವ ಕೇಂದ್ರಗಳನ್ನು ತೆರೆದಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಹಳೆ ಬಟ್ಟೆ, ಓದಿದ ಪುಸ್ತಕಗಳು, ಹಳೆಯ ಆಟಿಕೆಗಳು, ಹಳೆಯ ಬೈಸಿಕಲ್, ಹಳೆಯ ನ್ಯೂಸ್ ಪೇಪರ್‌ಗಳನ್ನು ನೀಡಿದರೆ ಅದನ್ನು ಪಾಲಿಕೆ ಸ್ವೀಕರಿಸುತ್ತದೆ. ಇಲ್ಲವೇ ನಿತ್ಯವೂ ಬೆಳಗಿನ ವೇಳೆ ಕಸ ಸಂಗ್ರಹಣೆಗೆ ಬರುವ ವಾಹನಗಳಿಗೂ ಈ ವಸ್ತುಗಳನ್ನು ನೀಡಬಹುದಾಗಿದೆ. ನಾಗರಿಕರು ಈ ಉಪಯುಕ್ತ ಯೋಜನೆಯನ್ನು ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಈ ಯೋಜನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನೀಡಿದರೆ ಬಟ್ಟೆಯ ಬ್ಯಾಗ್ ವಿತಗರಿಸಲಾಗುತ್ತದೆ. ಸಂಗ್ರಹವಾದ ಪ್ಲಾಸ್ಟಿಕ್ ಅನ್ನು ಮರು ಬಳಕೆಗೆ ನೀಡಲಾಗುತ್ತದೆ. ಇದೊಂದು ಅತ್ಯುತ್ತಮ ಸೇವಾ ಕಾರ್ಯವಾಗಿದೆ ಎಂದರು.

ಈ ವೇಳೆ ಕೆ.ಎಂ.ಪಿ.ಕೆ.ಟ್ರಸ್ಟ್ ನ ವಿಕ್ರಂ ಅಯ್ಯಂಗಾರ್,
ವಲಯ ಕಚೇರಿಯ ಆರೋಗ್ಯ ನಿರೀಕ್ಷಕಿ ಪ್ರೀತಿ, ಸಂಚಾಲಕರಾದ ಎಸ್ ಎನ್ ರಾಜೇಶ್, ಬೈರತಿ ಲಿಂಗರಾಜು, ಮಂಜುನಾಥ್, ರವಿಚಂದ್ರ, ಹಾಗು ಇನ್ನಿತರರು ಹಾಜರಿದ್ದರು.

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *