ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ… ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ..

ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ… ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ..

ಮೈಸೂರು,ಮೇ27,Tv10 ಕನ್ನಡ
ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ, ಕೆರೆ ಅಭಿವೃದ್ಧಿ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು.

ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಅಭಿವೃದ್ಧಿ ಮಾಡುವುದು ಅಗತ್ಯವಾಗಿದೆ. ಕೆರೆಯ ಆವರಣದಲ್ಲಿರುವ ಜಾಗಿಂಗ್‌ ಟ್ರ್ಯಾಕ್‌ ಅಭಿವೃದ್ಧಿಗೆ, ಕಸ, ಬಲೆ ಹಾಗೂ ತ್ಯಾಜ್ಯ ವಿಲೇವಾರಿ, ವಾಸನೆ ಬರುತ್ತಿರುವ ಭಾಗದಲ್ಲಿ ಹೂಳೆತ್ತುವುದು ಹಾಗೂ ಕೆರೆ ಸ್ವಚ್ಛಗೊಳಿಸಲು, ಬೋಟ್‌ ದುರಸ್ತಿ ಮಾಡಿಸಿ ಅದರ ಚಾಲನೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಹೇಳಿದರು.
ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಬೇಕು. ವಾಯು ವಿಹಾರ ಮಾರ್ಗದ ಸೇತುವೆ ಕಬ್ಬಿಣಕ್ಕೆ ಫೇಯಿಂಟ್ ಮಾಡಿಸಬೇಕು. ವಾಯುವಿಹಾರಿಗಳ ಅನುಕೂಲಕ್ಕಾಗಿ ಬೇಕಾಗುವ ಸೌಕರ್ಯಗಳ ಬಗ್ಗೆ ಗಮನಹರಿಸಲಾಗುವುದು ಎಂದು ತಿಳಿಸಿದರು.
ಈ ಸಂಬಂಧ ಕುಕ್ಕರ ಹಳ್ಳಿಕೆರೆ ಅಭಿವೃದ್ದಿಗೆ ಮಾಸ್ಟರ್ ಪ್ಲಾನ್ ಹಾಗೂ ಸೂಕ್ಷ್ಮ ಯೋಜನೆ ತಯಾರಿಸಿ ಮೈಕ್ರೋ ಪ್ಲಾಂಟ್ಸ್ ನಿರ್ವಹಣೆ ಮತ್ತು ಇಂಪ್ರೂವ್ಮೆಂಟ್ ಗೆ ವಿಶ್ವವಿದ್ಯಾನಿಲಯದಿಂದ ಸಿಎಸ್ ಆರ್ ಅನುದಾನ ಬಳಸಿಕೊಳ್ಳಲು ಕ್ರಮವಹಿಸಲಾಗುವುದು. ಕೆರೆಯ ಅಭಿವೃದ್ಧಿ ಮತ್ತು ಸರಿಯಾದ ನಿರ್ವಹಣೆಯಲ್ಲಿ ಸಾರ್ವಜನಿಕರ ಪಾತ್ರವೂ ಮುಖ್ಯವಾಗಿದ್ದು ಸಾರ್ವಜನಿಕರು ಕೆರೆಯನ್ನು ಸ್ವಚ್ಛವಾಗಿಡುವಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.

ಈ ವೇಳೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮಿಕಾಂತರೆಡ್ಡಿ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಲೋಕನಾಥ್ ಎನ್ ಕೆ, ಕುಲಸಚಿವರಾದ ಶೈಲಜಾ ಹಾಗೂ ಇತರರು ಹಾಜರಿದ್ದರು.

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *