ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ… ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ..

ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ… ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ..

ಮೈಸೂರು,ಮೇ27,Tv10 ಕನ್ನಡ
ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ, ಕೆರೆ ಅಭಿವೃದ್ಧಿ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು.

ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಅಭಿವೃದ್ಧಿ ಮಾಡುವುದು ಅಗತ್ಯವಾಗಿದೆ. ಕೆರೆಯ ಆವರಣದಲ್ಲಿರುವ ಜಾಗಿಂಗ್‌ ಟ್ರ್ಯಾಕ್‌ ಅಭಿವೃದ್ಧಿಗೆ, ಕಸ, ಬಲೆ ಹಾಗೂ ತ್ಯಾಜ್ಯ ವಿಲೇವಾರಿ, ವಾಸನೆ ಬರುತ್ತಿರುವ ಭಾಗದಲ್ಲಿ ಹೂಳೆತ್ತುವುದು ಹಾಗೂ ಕೆರೆ ಸ್ವಚ್ಛಗೊಳಿಸಲು, ಬೋಟ್‌ ದುರಸ್ತಿ ಮಾಡಿಸಿ ಅದರ ಚಾಲನೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಹೇಳಿದರು.
ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಬೇಕು. ವಾಯು ವಿಹಾರ ಮಾರ್ಗದ ಸೇತುವೆ ಕಬ್ಬಿಣಕ್ಕೆ ಫೇಯಿಂಟ್ ಮಾಡಿಸಬೇಕು. ವಾಯುವಿಹಾರಿಗಳ ಅನುಕೂಲಕ್ಕಾಗಿ ಬೇಕಾಗುವ ಸೌಕರ್ಯಗಳ ಬಗ್ಗೆ ಗಮನಹರಿಸಲಾಗುವುದು ಎಂದು ತಿಳಿಸಿದರು.
ಈ ಸಂಬಂಧ ಕುಕ್ಕರ ಹಳ್ಳಿಕೆರೆ ಅಭಿವೃದ್ದಿಗೆ ಮಾಸ್ಟರ್ ಪ್ಲಾನ್ ಹಾಗೂ ಸೂಕ್ಷ್ಮ ಯೋಜನೆ ತಯಾರಿಸಿ ಮೈಕ್ರೋ ಪ್ಲಾಂಟ್ಸ್ ನಿರ್ವಹಣೆ ಮತ್ತು ಇಂಪ್ರೂವ್ಮೆಂಟ್ ಗೆ ವಿಶ್ವವಿದ್ಯಾನಿಲಯದಿಂದ ಸಿಎಸ್ ಆರ್ ಅನುದಾನ ಬಳಸಿಕೊಳ್ಳಲು ಕ್ರಮವಹಿಸಲಾಗುವುದು. ಕೆರೆಯ ಅಭಿವೃದ್ಧಿ ಮತ್ತು ಸರಿಯಾದ ನಿರ್ವಹಣೆಯಲ್ಲಿ ಸಾರ್ವಜನಿಕರ ಪಾತ್ರವೂ ಮುಖ್ಯವಾಗಿದ್ದು ಸಾರ್ವಜನಿಕರು ಕೆರೆಯನ್ನು ಸ್ವಚ್ಛವಾಗಿಡುವಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.

ಈ ವೇಳೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮಿಕಾಂತರೆಡ್ಡಿ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಲೋಕನಾಥ್ ಎನ್ ಕೆ, ಕುಲಸಚಿವರಾದ ಶೈಲಜಾ ಹಾಗೂ ಇತರರು ಹಾಜರಿದ್ದರು.

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *