ಅಯೋಧ್ಯೆಯಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಶಾಖೆಗೆ ಭೂಮಿಪೂಜೆ‌…81 ನೇ ಜನ್ಮದಿನಾಚರಣೆ ಸಂಭ್ರಮ…

ಅಯೋದ್ಯೆ,ಮೇ27, Tv10 ಕನ್ನಡ
ಮೈಸೂರಿನ ಶ್ರೀ ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಪೀಠಾಧೀಶರಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ 81ನೇ ಜನ್ಮದಿನದ ಸಂಭ್ರಮ ಮನೆ ಮಾಡಿದೆ.ಸಾಮಾನ್ಯವಾಗಿ ಸ್ವಾಮೀಜಿಯವರ ಜನ್ಮದಿನ ಆಚರಣೆಯನ್ನು ಮೈಸೂರಿನ ಅವಧೂತ ದತ್ತಪೀಠದಲ್ಲಿ ನೆರವೇರಿಸಲಾಗುತಿತ್ತು. ಈ ಸಂದರ್ಭದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು,ಆಶ್ರಮದ ಆವರಣದಲ್ಲಿರುವ ದೇವಾಲಯಗಳಲ್ಲಿ ದೇವರುಗಳಿಗೆ ವಿಶೇಷ ಪೂಜೆಗಳು ನಡೆಯುತ್ತಿದ್ದವು.ಈ ಬಾರಿ ಸ್ವಾಮೀಜಿಯವರ ಅನುಪಸ್ಥಿತಿಯಲ್ಲಿ ಅವಧೂತ ದತ್ತಪೀಠದಲ್ಲಿ
ಶ್ರೀಗಳ ಜನ್ಮದಿನದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನೆರವೇರಿವೆ.ಆದರೆ ಈ ಬಾರಿ ಸ್ವಾಮೀಜಿಯವರು ಅಯೋಧ್ಯೆಯಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.ಹುಟ್ಟುಹಬ್ಬದ ಸಂಭ್ರಮದ ನಡುವೆ ಅಯೋಧ್ಯೆಯಲ್ಲಿ ಗಣಪತಿ ಸಚ್ಚಿದಾನಂದ ಆಶ್ರಮದ ಶಾಖೆ ಪ್ರಾರಂಭವಾಗುತ್ತಿದ್ದು ಶ್ರೀಗಳು ಸ್ವತಃ ಭೂಮಿ ನೆರವೇರಿಸಿದ್ದಾರೆ.
ಬೆಳಗಿನಿಂದಲೇ ಅಲ್ಲಿ ವಿಶೇಷ ಪೂಜಾ ಕಾರ್ಯಗಳು ಹೋಮಗಳು ನೆರವೇರಿದ್ದು, 11 ಗಂಟೆಗೆ ಭೂಮಿ ಪೂಜೆಯನ್ನು ಸ್ವಾಮೀಜಿ ನೆರವೇರಿಸಿದ್ದಾರೆ.ಲೋಕ ಕಲ್ಯಾಣಾರ್ಥವಾಗಿ ಇಂದು ಪೂಜೆಯನ್ನು ನೆರವೇರಿಸಲಾಗಿದೆ ಎಂದು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಈ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಆಶ್ರಮದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯನಂದ ತೀರ್ಥ ಸ್ವಾಮೀಜಿ ಸೇರಿದಂತೆ ಹಲವಾರು ಗುರುವರ್ಯರು ಮತ್ತು ಭಕ್ತರು ಪಾಲ್ಗೊಂಡಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *