ಅಯೋಧ್ಯೆಯಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಶಾಖೆಗೆ ಭೂಮಿಪೂಜೆ‌…81 ನೇ ಜನ್ಮದಿನಾಚರಣೆ ಸಂಭ್ರಮ…

ಅಯೋದ್ಯೆ,ಮೇ27, Tv10 ಕನ್ನಡ
ಮೈಸೂರಿನ ಶ್ರೀ ಅವಧೂತ ದತ್ತಪೀಠ, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಪೀಠಾಧೀಶರಾದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ 81ನೇ ಜನ್ಮದಿನದ ಸಂಭ್ರಮ ಮನೆ ಮಾಡಿದೆ.ಸಾಮಾನ್ಯವಾಗಿ ಸ್ವಾಮೀಜಿಯವರ ಜನ್ಮದಿನ ಆಚರಣೆಯನ್ನು ಮೈಸೂರಿನ ಅವಧೂತ ದತ್ತಪೀಠದಲ್ಲಿ ನೆರವೇರಿಸಲಾಗುತಿತ್ತು. ಈ ಸಂದರ್ಭದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು,ಆಶ್ರಮದ ಆವರಣದಲ್ಲಿರುವ ದೇವಾಲಯಗಳಲ್ಲಿ ದೇವರುಗಳಿಗೆ ವಿಶೇಷ ಪೂಜೆಗಳು ನಡೆಯುತ್ತಿದ್ದವು.ಈ ಬಾರಿ ಸ್ವಾಮೀಜಿಯವರ ಅನುಪಸ್ಥಿತಿಯಲ್ಲಿ ಅವಧೂತ ದತ್ತಪೀಠದಲ್ಲಿ
ಶ್ರೀಗಳ ಜನ್ಮದಿನದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನೆರವೇರಿವೆ.ಆದರೆ ಈ ಬಾರಿ ಸ್ವಾಮೀಜಿಯವರು ಅಯೋಧ್ಯೆಯಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.ಹುಟ್ಟುಹಬ್ಬದ ಸಂಭ್ರಮದ ನಡುವೆ ಅಯೋಧ್ಯೆಯಲ್ಲಿ ಗಣಪತಿ ಸಚ್ಚಿದಾನಂದ ಆಶ್ರಮದ ಶಾಖೆ ಪ್ರಾರಂಭವಾಗುತ್ತಿದ್ದು ಶ್ರೀಗಳು ಸ್ವತಃ ಭೂಮಿ ನೆರವೇರಿಸಿದ್ದಾರೆ.
ಬೆಳಗಿನಿಂದಲೇ ಅಲ್ಲಿ ವಿಶೇಷ ಪೂಜಾ ಕಾರ್ಯಗಳು ಹೋಮಗಳು ನೆರವೇರಿದ್ದು, 11 ಗಂಟೆಗೆ ಭೂಮಿ ಪೂಜೆಯನ್ನು ಸ್ವಾಮೀಜಿ ನೆರವೇರಿಸಿದ್ದಾರೆ.ಲೋಕ ಕಲ್ಯಾಣಾರ್ಥವಾಗಿ ಇಂದು ಪೂಜೆಯನ್ನು ನೆರವೇರಿಸಲಾಗಿದೆ ಎಂದು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಈ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಆಶ್ರಮದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯನಂದ ತೀರ್ಥ ಸ್ವಾಮೀಜಿ ಸೇರಿದಂತೆ ಹಲವಾರು ಗುರುವರ್ಯರು ಮತ್ತು ಭಕ್ತರು ಪಾಲ್ಗೊಂಡಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *