ಉದ್ಯಮಿ ಪುತ್ರನ ಶವ ನಿರ್ಮಾಣ ಹಂತದ ಕಟ್ಟಡದ ಗುಂಡಿಯಲ್ಲಿ ಪತ್ತೆ…ವಾಕಿಂಗ್ ತೆರಳಿದ ವೇಳೆ ಘಟನೆ…

ಉದ್ಯಮಿ ಪುತ್ರನ ಶವ ನಿರ್ಮಾಣ ಹಂತದ ಕಟ್ಟಡದ ಗುಂಡಿಯಲ್ಲಿ ಪತ್ತೆ…ವಾಕಿಂಗ್ ತೆರಳಿದ ವೇಳೆ ಘಟನೆ…

ಮೈಸೂರು,ಮೇ30,Tv10 ಕನ್ನಡ
ನಿರ್ಮಾಣ ಹಂತದ ಕಟ್ಟದ ಗುಂಡಿಯಲ್ಲಿ ಉದ್ಯಮಿ ಪುತ್ರನ ಶವ ದೊರೆತಿದೆ.ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಟೂಲ್ಸ್ ತಯಾರಿಸುವ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಚೆರಿಯನ್ ರವರ ಪುತ್ರ ಕ್ರಿಸ್ಟೋ ಚೆರಿಯನ್(35) ಮೃತ ದುರ್ದೈವಿ.ವೈದ್ಯರೊಬ್ಬರಿಗೆ ಸೇರಿದ ನಿವೇಶನದಲ್ಲಿ ನಿರ್ಮಿಸುತ್ತಿರುವ ಕಟ್ಟಡದ ಗುಂಡಿಯಲ್ಲಿ ಶವ ಪತ್ತೆಯಾಗಿದೆ.ಬೆಳಿಗ್ಗೆ ವಾಕಿಂಗ್ ತೆರಳಿದ ಕ್ರಿಸ್ಟೋಫರ್ ಚೆರಿಯನ್ ಮೃತದೇಹ ಮಧ್ಯಾಹ್ನದ ವೇಳೆಗೆ ಗುಂಡಿಯಲ್ಲಿ ಪತ್ತೆಯಾಗಿದೆ.

ಒಂದೂವರೆ ವರ್ಷದ ಹಿಂದೆ ಮರಿಯಾ ಎಂಬುವರನ್ನ ವಿವಾಹವಾಗಿದ್ದ ಕ್ರಿಸ್ಟೋಫರ್ ಚೆರಿಯನ್ ಒಂದು ಮಗುವಿನ ತಂದೆಯಾಗಿದ್ದರು.ಮೂರು ತಿಂಗಳ ಹಿಂದೆ ಆಕಸ್ಮಿಕವಾಗಿ ನಡೆದ ಘಟನೆಯಲ್ಲಿ ಕಾಲು ಮುರಿದುಕೊಂಡು ವಿಶ್ರಾಂತಿಯಲ್ಲಿದ್ದರು.ಓಡಾಡಲು ಸಾಧ್ಯವಾಗದ ಹಿನ್ನಲೆ ಕ್ರಿಸ್ಟೋಫರ್ ಮಾನಸಿಕ ಖಿನ್ನತೆಗೂ ಒಳಗಾಗಿದ್ದರೆಂದು ಹೇಳಲಾಗಿದೆ. ಶನಿವಾರ ಸಂಜೆ ವಾಕಿಂಗ್ ತೆರಳಿದ ಕ್ರಿಸ್ಟೋಫರ್ ಮನೆಗೆ ಹಿಂದಿರುಗಿಲ್ಲ.ಭಾನುವಾರ ಮಧ್ಯಾಹ್ನ ಕ್ರಿಸ್ಟೋಫರ್ ಮೃತದೇಹ ಗುಂಡಿಯಲ್ಲಿ ಪತ್ತೆಯಾಗಿದೆ.ಕ್ರಿಸ್ಟೋಫರ್ ಸಾವು ಆಕಸ್ಮಿಕವೋ ಕೊಲೆಯೋ ತನಿಖೆಯಲ್ಲಿ ಬಯಲಾಗಬೇಕಿದೆ.ಸಧ್ಯ ಮೃತನ ಪೋಷಕರು ಸೂಕ್ತ ತನಿಖೆ ನಡೆಸುವಂತೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ…

Spread the love

Related post

ರಿಯಲ್ ಎಸ್ಟೇಟ್ ವ್ಯವಹಾರ…ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ದ ದೂರು…

ರಿಯಲ್ ಎಸ್ಟೇಟ್ ವ್ಯವಹಾರ…ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ದ ದೂರು…

ಮೈಸೂರು,ಅ4,Tv10 ಕನ್ನಡ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಭಂಧಿಸಿದಂತೆ ಮೈಸೂರಿನಲ್ಲಿ ನಿವೃತ್ತ ಡಿವೈಎಸ್‌ಪಿ ಸೇರಿ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿವೃತ್ತ ಡಿವೈಎಸ್‌ಪಿ ವಿಜಯಕುಮಾರ್ ಹಾಗೂ…
ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

ಮೈಸೂರು,ಅ3,Tv10 ಕನ್ನಡ ಗೃಹಿಣಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೆ.ಆರ್.ಮೊಹಲ್ಲಾದ ವೀಣೇಶೇಷಣ್ಣ ರಸ್ತೆಯಲ್ಲಿ ನಡೆದಿದೆ.ಸ್ಪೂರ್ತಿ (31) ಆತ್ಮಹತ್ಯೆಗೆ ಶರಣಾದ ಗೃಹಿಣಿ.ಪತಿ ಶ್ರೀಕಂಠ ಹಾಗೂ ಆತನ…
ಹುಣಸೂರು:ಹುಲಿದಾಳಿ…ರೈತ ಬಲಿ…

ಹುಣಸೂರು:ಹುಲಿದಾಳಿ…ರೈತ ಬಲಿ…

ಹುಣಸೂರು,ಅ2,Tv10 ಕನ್ನಡ ಹುಲಿ ದಾಳಿಗೆ ರೈತ ಬಲಿಯಾದ ಘಟನೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಗಣೇಶ (55)ಹುಲಿ ದಾಳಿಗೆ ಬಲಿಯಾದ ರೈತ.ದನ ಮೇಯಿಸುವಾಗ ಹುಲಿ ದಾಳಿ ಮಾಡಿದೆ.ಹುಲಿ…

Leave a Reply

Your email address will not be published. Required fields are marked *