ಖಾಸಗಿ ಬಸ್ ಹಾಗೂ ಇನೋವಾ ಕಾರ್ ಢಿಕ್ಕಿ…10 ಮಂದಿ ಸ್ಥಳದಲ್ಲೇ ಸಾವು…ಇಬ್ಬರು ಗಂಭೀರ…

ಟಿ.ನರಸೀಪುರ,ಮೇ29,Tv10 ಕನ್ನಡ
ಖಾಸಗಿ ಬಸ್ ಹಾಗೂ ಇನೋವಾ ಕಾರ್ ನಡುವೆ ನಡೆದ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಳ್ಳೆಗಾಲ- ಟಿ.ನರಸೀಪುರ ರಸ್ತೆಯ ಕುರುಬೂರು ಬಳಿ ನಡೆದಿದೆ.ಇನೋವಾ ಕಾರಿನಲ್ಲಿದ್ದ 11 ಮಂದಿ ಪೈಕಿ 10 ಮಂದಿ ಸ್ಥಳದಲ್ಲೇ

ಸಾವನ್ನಪ್ಪಿದ್ದಾರೆ.ಇನ್ನಿಬ್ಬರ ಸ್ಥಿತಿ ಚಿಂತಾಜನಕ ಎನ್ನಲಾಗಿದೆ.ಇಬ್ಬರು ಬಾಲಕಿಯರು,ಓರ್ವ ಬಾಲಕ ಇಬ್ಬರು ಮಹಿಳೆಯರು ಹಾಗೂ 5 ಮಂದಿ ಪುರುಷರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಟಿ.ನರಸೀಪುರದಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ

ಎಸ್.ಎಮ್.ಆರ್.ಹೆಸರಿನ ಖಾಸಗಿ ಬಸ್ ಹಾಗೂ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ಬರುತ್ತಿದ್ದ ಇನೋವಾ ಕಾರ್ ನಡುವೆ ಅಪಘಾತ ಸಂಭವಿಸಿದೆ.ಮೃತರು ಬಳ್ಳಾರಿ ಜಿಲ್ಲೆಯ ಸಂಗದಕಲ್ಲೂರು ನಿವಾಸಿಗಳೆಂದು ಹೇಳಲಾಗಿದೆ.ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಭೇಟಿ ನೀಡಿ ಮತ್ತಷ್ಟು ಮಾಹಿತಿ ಪಡೆಯುತ್ತಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *