ಅಶ್ಲೀಲ ಫೋಟೋ ಕ್ರಿಯೇಟ್ ಮಾಡಿ ಅತಿಥಿ ಉಪನ್ಯಾಸಕನಿಗೆ ಬ್ಲಾಕ್ ಮೇಲ್…ಸೆನ್ ಪೊಲೀಸ್ ಠಾಣೆಗೆ ದೂರು…

ಮೈಸೂರು,ಜೂ1,Tv10 ಕನ್ನಡ
ಆನ್ ಲೈನ್ ಆಪ್ ಗಳಲ್ಲಿ ಲೋನ್ ಪಡೆಯುವ ಪ್ಲಾನ್ ಹಾಕಿದ್ದೀರಾ ಹಾಗಿದ್ರೆ ಹುಷಾರ್.ನೀವು ಬ್ಲಾಕ್ ಮೇಲ್ ಗೆ ಒಳಗಾಗೋದು ಖಚಿತ.ಮೈಸೂರಿನ ಅತಿಥಿ ಉಪನ್ಯಾಸಕರೊಬ್ಬರಿಗೆ ಇಂತಹ ಕಹಿ ಘಟನೆ ನಡೆದು ರಕ್ಷಣೆಗಾಗಿ ಸೆನ್ ಪೊಲೀಸರ ಮೊರೆ ಹೋಗಿದ್ದಾರೆ.ಮಾನಸಗಂಗೋತ್ರಿಯಲ್ಲಿ ಅತಿಥಿ ಉಪನ್ಯಾಸಕರಾಗಿರುವ ಚಂದ್ರಗುಪ್ತ ರವರಿಗೆ ಇಂತಹ ಕಹಿ ಘಟನೆ ನಡೆದಿದೆ.ಸೂಪರ್ ಲೋನ್ ಆಪ್ ನಲ್ಲಿ ಸಾಲ ಪಡೆದ ಚಂದ್ರಗುಪ್ತ ರವರನ್ನ ಬ್ಲಾಕ್ ಮೇಲ್ ಮಾಡಿ ಹಣ ಕಸಿಯುವ ಯತ್ನ ನಡೆಸಿದ ಕಿಡಿಗೇಡಿಗಳಿಗೆ ಸೆನ್ ಪೊಲೀಸರು ಬ್ರೇಕ್ ಹಾಕಿದ್ದಾರೆ.ಕೇವಲ ಮೂರು ಸಾವಿರ ಸಾಲ ಪಾಡೆಯಲು ಮುಂದಾದ ಚಂದ್ರಗುಪ್ತ ಇನ್ನಿಲ್ಲದ ಕಿರಿ ಕಿರಿ ಅನುಭವಿಸಿದ್ದಾರೆ.ಮೂರು ಸಾವಿರ ಸಾಲಕ್ಕಾಗಿ ಆಪ್ ನವರು ಕೇಳಿದ ದಾಖಲೆಗಳನ್ನ ಕೊಟ್ಟಿದ್ದಾರೆ.ದಾಖಲೆ ಕೊಟ್ಟ ಮರುಕ್ಷಣವೇ ಮೇ 20 ರಂದು ಮೂರು ಸಾವಿರ ಬದಲಾಗಿ ಕೇವಲ 1800 ರೂ ಜಮಾ ಮಾಡಿದ್ದಾರೆ.ಜಮಾ ಮಾಡಿದ ಏಳು ದಿನಗಳಿಗೆ ಅವಧಿ ಮುಗಿದಿದೆ ಹಣ ಹಿಂದಿರುಗಿಸಬೇಕೆಂದು ಮೆಸೇಜ್ ಹಾಕಿದ್ದಾರೆ.1800 ರೂ ಪಾವತಿಸಿದ ನಂತರ ಮತ್ತೆ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ.ಪಡೆದ 1800 ಸಾಲಕ್ಕೆ ಮೂರು ಸಾವಿರ ಪಾವತಿಸಿದ್ದರೂ ಮತ್ತಷ್ಟು ಹಣಕ್ಕಾಗಿ ಒತ್ತಾಯಿಸಿದ್ದಾರೆ.ಹಣ ಕೊಡಲು ನಿರಾಕರಿಸಿದಾಗ ಚಂದ್ರಗುಪ್ತ ರವರ ಅಕೌಂಟ್ ಹ್ಯಾಕ್ ಮಾಡಿ ಸಂಪೂರ್ಣ ಮಾಹಿತಿ ಕಲೆ ಹಾಕಿ ನಂತರ ಅಶ್ಲೀಲ ಫೋಟೋ ಒಂದನ್ನ ಕ್ರಿಯೇಟ್ ಮಾಡಿ ಸ್ನೇಹಿತರು ಹಾಗೂ ಸಂಭಂಧಿಕರಿಗೆ ರವಾನಿಸುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ.ಕೂಡಲೇ ಚಂದ್ರಗುಪ್ತ ರವರು ಮೈಸೂರು ನಗರದ ಸೆನ್ ಠಾಣೆ ಪೊಲೀಸರ ಮೊರೆ ಹೋಗಿ ದೂರು ನೀಡಿದ್ದಾರೆ.ಸೆನ್ ಪೊಲೀಸರ ಸಲಹೆ ಪಡೆದ ನಂತರ ಆಪ್ ನವರ ಬ್ಲಾಕ್ ಮೇಲ್ ನಿಂದ ಬಚಾವ್ ಆಗಿದ್ದಾರೆ.ಅನಾಮಧೇಯ ಆಪ್ ಗಳಲ್ಲಿ ಸಾಲ ಪಡೆಯುವ ಮುನ್ನ ಮುಂದಾಗುವ ಪ್ರಮಾದಗಳ ಬಗ್ಗೆ ಒಮ್ಮೆ ಚಿಂತಿಸುವುದು ಒಳಿತು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *