ಇಂದಿನಿಂದ ಶಾಲೆ ಆರಂಭ…ಹೂವು,ಸಿಹಿ, ಪಠ್ಯಪುಸ್ತಕ ವಿತರಿಸಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಕರು…

ಮೈಸೂರು,ಮೇ31,Tv10 ಕನ್ನಡ
ಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯ
ವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ ಸ್ವಾಗತಿಸಲಾಗಿದೆ.
ಶಾಲೆಗಳನ್ನು ಮಾವಿನ ತಳಿರು ಮತ್ತು ಹೂವುಗಳಿಂದ ಅಲಂಕರಿಸಿ, ಶಿಕ್ಷಕರು ಹೂ ಹಿಡಿದು ಶಾಲಾ ದ್ವಾರದಲ್ಲಿ ನಿಂತು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.
ಇಲ್ಲಿನ ಅಕ್ಕನ ಬಳಗ ಶಾಲೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ರಂಗೋಲಿಯ ಚಿತ್ತಾರದೊಂದಿಗೆ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕ ಇಟ್ಟು, ಹೂವು ನೀಡಿ, ಸಿಹಿ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ನಂತರ ಮಾತನಾಡಿದ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಕ್ಕಳು ಸಂತೋಷ ಹಾಗೂ ಖುಷಿಯಿಂದ ಶಾಲೆಗೆ ಆಗಮಿಸಬೇಕು ಶಿಕ್ಷಕರು ಕೂಡ ಮಕ್ಕಳ ಎಳೆ ಮನಸ್ಸನ್ನು ಅರಿತುಕೊಂಡು ವಿದ್ಯಾದಾನ ಮಾಡಬೇಕು, ಮಕ್ಕಳು ಸಂಪೂರ್ಣವಾಗಿ ವಿದ್ಯಾರ್ಜನೆ ಎಲ್ಲಿ ತೊಡಗಿಸಿಕೊಳ್ಳಬೇಕು, ಬಾಹ್ಯ ಆಕರ್ಷಣೆಗಳಿಗೆ ಒಳಗಾಗಬಾರದು, ವಿದ್ಯೆಯೇ ಜೊತೆ ಸಂಸ್ಕೃತಿ ಕಲೆಯನ್ನು ಅವ್ಯಸವನ್ನಾಗಿ ಮಾಡಿಕೊಳ್ಳಬೇಕು. ಆಗ ಜೀವನ ಪರಿಪೂರ್ಣವಾಗುತ್ತದೆ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು
ಇದೇ ಸಂದರ್ಭದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಚಿನ್ನ ಬೆಳ್ಳಿ ವ್ಯಾಪಾರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್, ಬೈರತಿ ಲಿಂಗರಾಜು, ಎಸ್‌ ಎನ್ ರಾಜೇಶ್, ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ, ಶಿವಯ್ಯ, ಶಿಲ್ಪ, ನಾಗರತ್ನ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *