ಇಂದಿನಿಂದ ಶಾಲೆ ಆರಂಭ…ಹೂವು,ಸಿಹಿ, ಪಠ್ಯಪುಸ್ತಕ ವಿತರಿಸಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಕರು…

ಮೈಸೂರು,ಮೇ31,Tv10 ಕನ್ನಡ
ಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯ
ವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ ಸ್ವಾಗತಿಸಲಾಗಿದೆ.
ಶಾಲೆಗಳನ್ನು ಮಾವಿನ ತಳಿರು ಮತ್ತು ಹೂವುಗಳಿಂದ ಅಲಂಕರಿಸಿ, ಶಿಕ್ಷಕರು ಹೂ ಹಿಡಿದು ಶಾಲಾ ದ್ವಾರದಲ್ಲಿ ನಿಂತು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.
ಇಲ್ಲಿನ ಅಕ್ಕನ ಬಳಗ ಶಾಲೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ರಂಗೋಲಿಯ ಚಿತ್ತಾರದೊಂದಿಗೆ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕ ಇಟ್ಟು, ಹೂವು ನೀಡಿ, ಸಿಹಿ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ನಂತರ ಮಾತನಾಡಿದ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಕ್ಕಳು ಸಂತೋಷ ಹಾಗೂ ಖುಷಿಯಿಂದ ಶಾಲೆಗೆ ಆಗಮಿಸಬೇಕು ಶಿಕ್ಷಕರು ಕೂಡ ಮಕ್ಕಳ ಎಳೆ ಮನಸ್ಸನ್ನು ಅರಿತುಕೊಂಡು ವಿದ್ಯಾದಾನ ಮಾಡಬೇಕು, ಮಕ್ಕಳು ಸಂಪೂರ್ಣವಾಗಿ ವಿದ್ಯಾರ್ಜನೆ ಎಲ್ಲಿ ತೊಡಗಿಸಿಕೊಳ್ಳಬೇಕು, ಬಾಹ್ಯ ಆಕರ್ಷಣೆಗಳಿಗೆ ಒಳಗಾಗಬಾರದು, ವಿದ್ಯೆಯೇ ಜೊತೆ ಸಂಸ್ಕೃತಿ ಕಲೆಯನ್ನು ಅವ್ಯಸವನ್ನಾಗಿ ಮಾಡಿಕೊಳ್ಳಬೇಕು. ಆಗ ಜೀವನ ಪರಿಪೂರ್ಣವಾಗುತ್ತದೆ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು
ಇದೇ ಸಂದರ್ಭದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಚಿನ್ನ ಬೆಳ್ಳಿ ವ್ಯಾಪಾರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್, ಬೈರತಿ ಲಿಂಗರಾಜು, ಎಸ್‌ ಎನ್ ರಾಜೇಶ್, ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ, ಶಿವಯ್ಯ, ಶಿಲ್ಪ, ನಾಗರತ್ನ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *