ಇಂದಿನಿಂದ ಶಾಲೆ ಆರಂಭ…ಹೂವು,ಸಿಹಿ, ಪಠ್ಯಪುಸ್ತಕ ವಿತರಿಸಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಕರು…

ಮೈಸೂರು,ಮೇ31,Tv10 ಕನ್ನಡ
ಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯ
ವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ ಸ್ವಾಗತಿಸಲಾಗಿದೆ.
ಶಾಲೆಗಳನ್ನು ಮಾವಿನ ತಳಿರು ಮತ್ತು ಹೂವುಗಳಿಂದ ಅಲಂಕರಿಸಿ, ಶಿಕ್ಷಕರು ಹೂ ಹಿಡಿದು ಶಾಲಾ ದ್ವಾರದಲ್ಲಿ ನಿಂತು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.
ಇಲ್ಲಿನ ಅಕ್ಕನ ಬಳಗ ಶಾಲೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ರಂಗೋಲಿಯ ಚಿತ್ತಾರದೊಂದಿಗೆ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕ ಇಟ್ಟು, ಹೂವು ನೀಡಿ, ಸಿಹಿ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ನಂತರ ಮಾತನಾಡಿದ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಕ್ಕಳು ಸಂತೋಷ ಹಾಗೂ ಖುಷಿಯಿಂದ ಶಾಲೆಗೆ ಆಗಮಿಸಬೇಕು ಶಿಕ್ಷಕರು ಕೂಡ ಮಕ್ಕಳ ಎಳೆ ಮನಸ್ಸನ್ನು ಅರಿತುಕೊಂಡು ವಿದ್ಯಾದಾನ ಮಾಡಬೇಕು, ಮಕ್ಕಳು ಸಂಪೂರ್ಣವಾಗಿ ವಿದ್ಯಾರ್ಜನೆ ಎಲ್ಲಿ ತೊಡಗಿಸಿಕೊಳ್ಳಬೇಕು, ಬಾಹ್ಯ ಆಕರ್ಷಣೆಗಳಿಗೆ ಒಳಗಾಗಬಾರದು, ವಿದ್ಯೆಯೇ ಜೊತೆ ಸಂಸ್ಕೃತಿ ಕಲೆಯನ್ನು ಅವ್ಯಸವನ್ನಾಗಿ ಮಾಡಿಕೊಳ್ಳಬೇಕು. ಆಗ ಜೀವನ ಪರಿಪೂರ್ಣವಾಗುತ್ತದೆ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು
ಇದೇ ಸಂದರ್ಭದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಚಿನ್ನ ಬೆಳ್ಳಿ ವ್ಯಾಪಾರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್, ಬೈರತಿ ಲಿಂಗರಾಜು, ಎಸ್‌ ಎನ್ ರಾಜೇಶ್, ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ, ಶಿವಯ್ಯ, ಶಿಲ್ಪ, ನಾಗರತ್ನ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *