ಕುವೆಂಪುನಗರ ಠಾಣಾ ಪೊಲೀಸರ ಕಾರ್ಯಾಚರಣೆ…ಪ್ಯೂಮಾ ಷೋರೂಂ ನಲ್ಲಿ ಕಳವು ಮಾಡಿದ್ದ ಆರೋಪಿ ಸೆರೆ…

ಮೈಸೂರು,ಜೂ2,Tv10 ಕನ್ನಡ
ಪ್ಯೂಮಾ ಷೋರೂಂ ನ ಶೆಟರ್ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಜ್ವಲ್(20) ಬಂಧಿತ ಆರೋಪಿ.ಬಂಧಿತನಿಂದ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ.ಎರಡು ಮೊಬೈಲ್ ಹಾಗೂ 5500/ ರೂ ನಗದು ವಶಪಡಿಸಿಕೊಂಡಿದ್ದಾರೆ.ಷೆಟರ್ ಮುರಿದು ಷೋರೂಂ ನಲ್ಲಿದ್ದ 27 ಸಾವಿರ ನಗದು ಹಾಗೂ 20 ಸಾವಿರ ಮೌಲ್ಯದ ಪಾದರಕ್ಷೆಗಳು,ಕ್ಯಾಪ್ ಹಾಗೂ ಪರ್ಸ್ ಗಳನ್ನ ಮೇ 7 ರಂದು ಪ್ರಜ್ವಲ್ ದೋಚಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ ಕುವೆಂಪುನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯು ತನ್ನ ಸಹಚರರಾದ ನಿತಿನ್,ಭಾಷಾ,ಚೇತನ್ ಎಂಬುವರ ಜೊತೆ ಸೇರಿ ಮೈಸೂರು,ಬೆಂಗಳೂರು,ಹೊಸಪೇಟೆ,ಅರಸೀಕೆರೆ ಸೇರಿದಂತೆ ವಿವಿದೆಡೆ ಇದೇ ರೀತಿ ಅಪರಾಧಗಳಲ್ಲಿ ಪಾಲ್ಗೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಪ್ರಶಂಸಿಸಿದ್ದಾರೆ.

ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಲ್ಲಿ.ಕೆ.ಆರ್.ಉಪವಿಭಾಗದ ಎಸಿಪಿ ಗಂಗಾಧರಸ್ವಾಮಿ ರವರ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಪಿಐ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಗೋಪಾಲ್,ಕು.ರಾಧಾ ಎಎಸ್ಸೈ ಗಳಾದ ಕಾಂತರಾಜು,ಮಹದೇವ ಹಾಗೂ ಸಿಬ್ಬಂದಿಗಳಾದ ವಿರೂಪಾಕ್ಷ,ಮಂಜುನಾಥ್,ಆನಂದ್,ಪುಟ್ಟಪ್ಪ,ಹಜರತ್,ಸುರೇಶ್,ನಾಗೇಶ್ ಶ್ರೀನಿವಾಸ್,ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *