ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ: ಎನ್ ಚಲುವರಾಯಸ್ವಾಮಿ

ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ: ಎನ್ ಚಲುವರಾಯಸ್ವಾಮಿ

ಮಂಡ್ಯ,ಜೂ,04:-ಜಿಲ್ಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಗೆ ಇರುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ‌ ನಡೆಸಿ ಪರಿಹರಿಸಿ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಮದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಉದ್ಘಾಟಿಸಿ ಮಾತನಾಡಿದರು‌. ಜನಪರವಾದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿ ಮೈಸೂರು ಪ್ರಂತ್ಯದ ದೈವಸ್ವರೂಪರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಉದ್ಘಾಟನೆ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದರು.

ದೇಶದಲ್ಲಿ ಆನೇಕ ರಾಜರು ಆಳ್ವಿಕೆ ಮಾಡಿದ್ದಾರೆ. ಮೈಸೂರು ಪ್ರಾಂತ್ಯದ ರಾಜರಾದ ನಾಲ್ವಡಿ ಅವರ ಹೆಸರು ಇಂದಿಗೂ ಅಚ್ಚಳಿಯದೇ ಉಳಿದಿದೇ ಎಂದರೇ ಅದಕ್ಕೆ ಕಾರಣ ಅವರು ಮಾಡಿದ ಜನಪರ‌ ಕೆಲಸಗಳು ಎಂದರು.

ನಾಲ್ವಡಿ ಅವರ ಚಿಂತನೆಗಳ ಫಲವಾಗಿ ಬೇರೆ ರಾಜ್ಯಗಳಿಗೆ ಹೋಲಿಸಿದರೇ ಕರ್ನಾಟಕ ರಾಜ್ಯದ ಜನರು ಉತ್ತಮ ಮೂಲಭೂತ ವ್ಯವಸ್ಥೆಗಳೊಂದಿಗೆ ಜೀವನ ನಡೆಸಿತ್ತಿದ್ದಾರೆ ಎಂದರು.

ನಾಲ್ವಡಿ ಅವರು ಸರ್ಕಾರ ಎಂಬ ವ್ಯವಸ್ಥೆ ಪ್ರಾರಂಭವಾಗುವ ಮೊದಲೇ ರಾಜರ ಆಳ್ವಿಕೆಯಲ್ಲಿ ಶಾಲಾ, ಕಾಲೇಜು, ನೀರಾವರಿ, ಕಾರ್ಖಾನೆಗಳು, ರೈಲ್ವೆ ವ್ಯವಸ್ಥೆಯನ್ನು ಮಾಡಿ ಅಭಿವೃದ್ಧಿಗೆ ಹೊಸ ದಿಕ್ಕನ್ನು ನೀಡಿದರು‌. ದೇವದಾಸಿ, ಬಸವಿ ಪದ್ಧತಿ ಯಂತಹ ಸಮಾಜದ ಪಿಡುಗನ್ನು ತೊಡದು ಹಾಕಿದರು ಎಂದರು.

ನಾಲ್ವಡಿ ಅವರ ಸಾಧನೆಗಳು ಅಪಾರ ಮಂಡ್ಯ ಜಿಲ್ಲೆಯಲ್ಲಿರುವ ಕನ್ನಂಬಾಡಿ ಅಣೆಕಟ್ಟು ನಿರ್ಮಾಣ ಮಾಡುವ ಸಂದರ್ಭದಲ್ಲಿ ಹಣದ ಕೊರತೆಯಿಂದ ತಮ್ಮ ಬಳಿಯಿದ್ದ ಚಿನ್ನವನ್ನು ಅಡವಿಟ್ಟರು. ಅವರ ತ್ಯಾಗವನ್ನು ಸದಾ ನೆನೆಯಬೇಕು ಎಂದರು.

ಸಮಾಜಿಕ ಇತಿಹಾಸಕಾರರಾದ ಎ.ಎಸ್ ಧಮೇಂದ್ರಕುಮಾರ್ ರವರು ಮಾತನಾಡಿ
ರಾಜರ ಕಾಲದಲ್ಲಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ, ವಯಸ್ಕರಿಗೆ ಶಿಕ್ಷಣಕ್ಕಾಗಿ ರಾತ್ರಿ ವೇಳೆ ಶಿಕ್ಷಣವನ್ನು‌ ಮೊದಲ ಬಾರಿಗೆ ಜಾರಿಗೆ ತಂದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಎಂದರು.

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಗೋಷ ಟಾಂಗಾ, ಕುರುಡರಿಗೆ ಬ್ರೈಲ್ ಲಿಪಿ ಈಗೇ ಯಾರೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಅವರು ವಿವಿಧ ರೀತಿಯ ಬದಲಾವಣೆಗಳನ್ನು ತಂದರು. ದೇಶಕ್ಕೆ ಮೊಟ್ಟ‌ಮೊದಲ ಬಾರಿಗೆ‌ ಮತದಾನ ಪ್ರಕ್ರಿಯೆಯನ್ನು‌ ಪರಿಚಯಿಸಿಕೊಟ್ಟರು ಎಂದರು.

ಮೈಸೂರು ಯದುವೀರ್ ಕೃಷ್ಣಧತ್ತ ಚಾಮರಾಜ ಒಡೆಯರ್ ರವರು ಮಾತನಾಡಿ ನಾಲ್ವಡಿ ಕೃಷ್ಣರಾಜ‌ ಒಡೆಯರ್ ಅವರ ಕೆಲಸಗಳನ್ನು ಸ್ಮರಿಸಿ ಜನರು ಹಾಗೂ ಸರ್ಕಾರ ಜಯಂತಿ ಆಚರಿಸಸುತ್ತಿರುವುದು ಸಂತೋಷದ ವಿಷಯವಾಗಿದೆ. ಅವರ ಕಾಲದಲ್ಲಿ ನಿರ್ಮಾಣವಾದ ಕಾರ್ಖಾನೆಗಳನ್ನು ಅಭಿವೃದ್ಧಿ ಪಡಿಸಿ ಎಂದರು.

ನಾಲ್ವಡಿ ಜಯಂತಿ ದಿನದಂದು ರಕ್ತದಾನ ಶಿಬಿರ ನಡೆಸುತ್ತಿರುವುದಯ ಶ್ಲಾಘನೀಯ ಕೆಲಸ. ಇಂತಹ‌ ಸಮಾಜಮುಖಿ ಕೆಲಸಗಳು‌ ಹೆಚ್ಚು ಹೆಚ್ಚು ನಡೆಯಬೇಕು ಎಂದರು.
.
ಕನ್ಬಂಬಾಡಿ ಕಟ್ಟಿ ಮಂಡ್ಯ ಜಿಲ್ಲೆಯ ಕೃಷಿಗೆ ನೀರನ್ನು ಹಾಗೂ ಮೈ ಶುಗರ್ ಕಾರ್ಖಾನೆ ನಿರ್ಮಿಸಿ‌ ಸಕ್ಕರೆ ನಾಡು ಹೆಸರನ್ನು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಇಡುವಂತೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸುವುದಾಗಿ‌ ಮಂಡ್ಯ ಶಾಸಕರಾದ ರವಿಕುಮಾರ್ ಗಣಿಗ ಅವರು‌ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಎ.ಬಿ ರಮೇಶ್ ಬಾಬು ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ, ಜಿಲ್ಲಾಧಿಕಾರಿ ಡಾ; ಹೆಚ್.ಎನ್ ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಎನ್ ಯತೀಶ್, ವಿವಿಧ ಸಂಘಟನೆಗಳ ಮುಖ್ಯಸ್ಥರಾದ ಮೀರಾ ಶಿವಲಿಂಗಯ್ಯ, ತಗ್ಗಹಳ್ಳಿ ವೆಂಕಟೇಶ್, ಸುರೇಶ್, ನಟರಾಜ್, ಲಂಕೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *