ಗಣಪತಿ ಶ್ರೀಗಳ ಜನ್ಮದಿನೋತ್ಸವ…ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭಾಗಿ…

ಗಣಪತಿ ಶ್ರೀಗಳ ಜನ್ಮದಿನೋತ್ಸವ…ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭಾಗಿ…

ಮೈಸೂರು,ಜೂ4,Tv10 ಕನ್ನಡ
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 81 ಜನ್ಮದಿನೋತ್ಸವ ಕಾರ್ಯಕ್ರಮ ಇಂದು ಆಶ್ರಮದಲ್ಲಿ ಅದ್ದೂರಿಯಾಗಿ ನೆರವೇರಿತು.ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ನಂತರ ಮಾತನಾಡಿ ಶ್ರೀಗಳ ಜೀವನ ಇತಿಹಾಸದ ಪುಟಗಳಲ್ಲಿ ಬರೆದಿಡುವಂತದ್ದು, ಅವರ ಜನಪರ ಕಾರ್ಯಗಳಿಗೆ ನಾನು ಸಂಪೂರ್ಣ ಸಹಕಾರ ಕೊಟ್ಟು ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು


ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಜನರ ಏಳಿಗೆಗಾಗಿ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ಐತಿಹಾಸಿಕ ನಿರ್ಧಾರಗಳಿಂದ ಮಾದರಿ ಆಡಳಿತ ನೀಡಿ ಮಾದರಿಯಾಗಿರುವಂತೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮಹಾನ್ ಮಾನವತಾವಾದಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು. 81ನೇ ವರ್ಷದ ಜನ್ಮ ದಿನೋತ್ಸವದ ಪ್ರಯುಕ್ತ ಆದಿವಾಸಿಗಳು ಮತ್ತು ‌ವಿಕಲಚೇತನರಿಗೆ ಕೊಡುಗೆಗಳನ್ನು ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು


ಆದಿವಾಸಿ ಮಕ್ಕಳಿಗೆ ಶಾಲಾ ವಾಹನ ನೀಡುವುದು, ಅಲ್ಪಸಂಖ್ಯಾತರಿಗೆ,ವಿಕಲಚೇತನರಿಗೆ ಸಹಾಯ ಹಸ್ತ ನೀಡಿ, ಸಮಾಜಮುಖಿ ಕೆಲಸ ಮಾಡುವ ಮೂಲಕ‌ ಪೂಜಾ ಸ್ವಾಮೀಜಿಯವರು ತಮ್ಮ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎಂದು ನುಡಿದರು.ಶೋಷಿತ ಸಮುದಾಯದವರಿಗೆ, ನಿರ್ಗತಿಕರಿಗೆ, ಬಡವರಿಗೆ, ಮಹಿಳೆಯರಿಗೆ ಮತ್ತು ಎಲ್ಲಾ ಜನರಿಗೆ ಸ್ವಾಮೀಜಿಯವರ ಮಾರ್ಗದರ್ಶನ ಲಭ್ಯವಾಗಲಿ ಹಾರೈಸಿದರು.
ಅವಧೂತ ದತ್ತ ಪೀಠದ ವತಿಯಿಂದ
ಎಚ್ ಡಿ ಕೋಟೆ, ಸೋನಹಳ್ಳಿ, ಮಡಿಲು ಸೇವಾ ಟ್ರಸ್ಟ್ ನವರಿಗೆ ಶಾಲಾ ವಾಹನ ಹಾಗೂ ವಿಕಲಚೇತನರಿಗೆ 80ಕ್ಕೂ ಹೆಚ್ಚು ಉಪಕರಣಗಳನ್ನು ಸಚಿವ‌ ‌ಮಹದೇವಪ್ಪ ವಿತರಿಸಿದರು.
ಇದಕ್ಕೂ ಮೊದಲು ಭಕ್ತರಿಗೆ ಆಶೀರ್ವಚನ ನೀಡಿದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು
ಭಗವದ್ಗೀತೆ ಎಲ್ಲರನ್ನು ರಕ್ಷಣೆ ಮಾಡುವ ಒಂದು ವರ ಎಂದು ಬಣ್ಣಿಸಿದರು.ಭೂಕಂಪ ಸೇರಿದಂತೆ ಯಾವುದೇ ಅವಗಡಗಳಿಂದ ಭಗವದ್ಗೀತೆ ನಮ್ಮನ್ನು ರಕ್ಷಣೆ ಮಾಡುತ್ತದೆ, ಭಗವದ್ಗೀತೆಯನ್ನು ಕಂಠಪಾಠ ಮಾಡುತ್ತಿದ್ದರೆ ಮನಸ್ಸು ಪವಿತ್ರವಾಗುತ್ತದೆ, ಪ್ರತಿದಿನ ಗೀತೆಯ ಒಂದು ಅಧ್ಯಾಯ ಓದಿದರೆ ಒಳಿತಾಗಲಿದೆ ಎಂದು ‌ಸಲಹೆ ನೀಡಿದರು.ಪ್ರತಿದಿನ ಭಗವಂತನ ಸ್ಮರಣೆಗೆ ಸ್ವಲ್ಪವಾದರೂ ಸಮಯ ಮೀಸಲಿಡಿ ಎಂದು ಶ್ರೀಗಳು ತಿಳಿಸಿದರು.ಇದೇ ವೇಳೆ ಭಗವದ್ಗೀತೆ 700 ಲೋಕಗಳನ್ನು ಕಂಠಪಾಠ ಮಾಡಿದವರಿಗೆ ಚಿನ್ನದ ಪದಕವನ್ನು ಸ್ವಾಮೀಜಿ ವಿತರಣೆ ಮಾಡಿದರು. ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *