ವಿಶ್ವ ಪರಿಸರ ದಿನಾಚರಣೆ…ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಜಾಗೃತಿ ಅಭಿಯಾನ…

ಮೈಸೂರು,ಜೂ5,Tv10 ಕನ್ನಡ ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್
ವತಿಯಿಂದ ವಿಶ್ವ ಇಂದು ಪರಿಸರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು‌.ದೇವರಾಜ ಮಾರುಕಟ್ಟೆ ಬಳಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಸ್ವಚ್ಛತಾ ಜಾಗೃತಿ ಮೂಡಿಸಲಾಯಿತು.ಮೇಯರ್ ಶಿವಕುಮಾರ್ ಪ್ಲಾಸ್ಟಿಕ್ ಮುಕ್ತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿ ಇಂದಿನ ಕಾಲಘಟ್ಟದಲ್ಲಿ ಸ್ವಚ್ಛತೆ ಎಲ್ಲಿ ಆರಂಭಗೊಳ್ಳ ಬೇಕಂದರೆ ಪ್ರಾಥಮಿಕ ಹಂತದಲ್ಲಿ ಜನಸಾಮಾನ್ಯರಿಗೆ ಅರಿವು ಮೂಡಿಸಿದಾಗ ಕಂಡ ಕಂಡಲ್ಲಿ ಎಸೆಯುವ ಮನಸ್ಥಿತಿ ತಗ್ಗಲಿದೆ.ಪ್ರಸ್ತುತ ಪ್ಲಾಸ್ಟಿಕ್ ತ್ಯಾಜ್ಯದ ಕೊಂಪೆ ನಮ್ಮ ಪರಿಸರವನ್ನು ಆವರಿಸಿಕೊಂಡಿದೆ, ಇದರಿಂದ ವಿವಿಧ ರೀತಿಯ ಸಾಂಕ್ರಾಮಿಕ ಖಾಯಿಲೆಗಳು ಸೃಷ್ಠಿಯಾಗುತ್ತಿದೆ. ಪರಿಸರವನ್ನು ನಾವು ಆರಾಧಿಸಿದರೆ ಅವುಗಳು ನಮ್ಮನ್ನು ಹಾಗೂ ನಮ್ಮ ಮುಂದಿನ ಪೀಳಿಗೆಯನ್ನು ಕಾಯುತ್ತವೆ. ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಂಘ ಸಂಸ್ಥೆಗಳ ವಿವಿಧ ಬಗ್ಗೆಯ ಕಾರ್ಯಕ್ರಮಗಳು ಸಹಕಾರಿ ಈ ನಿಟ್ಟಿನಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಯುವಕರ ಕಾರ್ಯ ಶ್ಲಾಘನೀಯ, ಯಾವುದೇ ಕಾರ್ಯಕ್ರಮ ಆಯೋಜಿಸಿಕೊಂಡು ಬರುವುದು ಸುಲಭ ಆದರೆ ಅದನ್ನು ನಿರಂತವಾಗಿ ಕೊಂಡ್ಯೊಯುವುದು ಬಹುದೊಡ್ಡ ಸಾಧನೆಯಾಗಿದೆ ಇದಕ್ಕೆಲ್ಲ ನಮ್ಮ ಕಣ್ಮುಂದೆ ಇಂಥಹ ಸಂಘಟನೆಗಳೇ ಸಾಕ್ಷಿಯಾಗಿವೆ.
ಪ್ಲಾಸ್ಟಿಕ್ ಅನ್ನು ಮಿತವಾಗಿ ಬಳಸಿ ಪರಿಸರವನ್ನು ಉಳಿಸಿ ಎಂಬ ಘೋಷವಾಕ್ಯ ನಮ್ಮೆಲ್ಲ ಕೇರಿಗಳಲ್ಲಿಮೊಳಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಆರ್ ರಘು ಕೌಟಿಲ್ಯ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ನಗರಪಾಲಿಕಾ ಸದಸ್ಯರಾದ ಪ್ರಮೀಳಾ ಬರತ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್, ಪರಿಸರ ಇಂಜಿನಿಯರ್ ಜ್ಯೋತಿ, ಕಿರಿಯ ಆರೋಗ್ಯ ನಿರೀಕ್ಷಕರು ಪ್ರೀತಿ
ವಿದ್ಯಾರಣ್ಯ ಟ್ರಸ್ಟ್ ಅಧ್ಯಕ್ಷರಾದ ರವಿಶಂಕರ್, ಬೈರತಿ ಲಿಂಗರಾಜು, ಎಸ್ ಎನ್ ರಾಜೇಶ್, ದೂರ ರಾಜಣ್ಣ, ಸುಚೇಂದ್ರ,ವಿಘ್ನೇಶ್ವರ ಭಟ್, ವೆಂಕಟ್ ರಾಮು, ಚರಣ್, ಹಾಗೂ ಇನ್ನಿತರರು ಭಾಗವಹಿಸಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *