ಎದುರು ಮನೆ ಆಂಟಿ ಕೈ ಚಳಕ…? 27 ಲಕ್ಷ ನಗದು 300 ಗ್ರಾಂ ಚಿನ್ನಾಭರಣ ಕಳುವು…

ಬನ್ನೂರು,ಜೂ7,Tv10 ಕನ್ನಡ
ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಇಟ್ಟಿದ್ದ 27 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನಾಭರಣ ಕಳುವಾದ ಘಟನೆ ಬನ್ನೂರಿನ ಹೊರಕೇರಿ ವಾರ್ಡ್ ನಲ್ಲಿ ನಡೆದಿದೆ.ಗೋವಿಂದ ಎಂಬುವರ ಮನೆಯ ಬೀರು ಬಾಗಿಲು ಮುರಿದಿರುವ ಚಾಲಾಕಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ.ತಮ್ಮ ಮನೆಗೆ ಹೊಂದಿಕೊಂಡಂತೆ ಮತ್ತೊಂದು ಮನೆಯಲ್ಲಿ ವಾಸ ಮಾಡುತ್ತಿರುವ ತಾಯಿ ಮಗಳು ಕಳ್ಳತನ ಮಾಡಿರುವುದಾಗಿ ಗೋವಿಂದ ರವರು ಆರೋಪಿಸಿ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜೂ 5 ರಂದು ಗೋವಿಂದ ರವರು ತಾವು ಹಾಗೂ ತಮ್ಮ ಸಹೋದರನ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ.ಜೂನ್ 6 ರಂದು ಹಿಂದಿರುಗಿದಾಗ ಮನೆಯಲ್ಲಿದ್ದ ಲಾಕರ್ ಬೀಗ ಮುರಿದಿದ್ದು ಅದರಲ್ಲಿದ್ದ 27 ಲಕ್ಷ ನಗದು ಹಾಗೂ 308 ಗ್ರಾಂ ಒಡವೆಗಳು ನಾಪತ್ತೆಯಾಗಿದೆ.ಅಕ್ಕನ ಮಗನ ಮದುವೆಗೆ ಉಡುಗೊರೆಯಾಗಿ ನಿವೇಶನ ಖರೀದಿಸುವ ಸಲುವಾಗಿ ಗೋವಿಂದ ಹಣವನ್ನ ಹೊಂದಿಸಿ ಇಟ್ಟಿದ್ದರು.ಈ ವಿಚಾರ ಮುಂದಿನ ಮನೆಯಲ್ಲಿದ್ದ ತಾಯಿ ಮಗಳಾದ ಮೀನಾಕ್ಷಮ್ಮ ಹಾಗೂ ರತ್ನ ಇಬ್ಬರಿಗೆ ಮಾತ್ರ ತಿಳಿದಿತ್ತು.ಮನೆಯ ಸದಸ್ಯರಂತೆ ಗೋವಿಂದ ಮನೆಯವರ ಜೊತೆ ಇವರು ಆತ್ಮೀಯವಾಗಿದ್ದರು.ನಗದು ಮತ್ತು ಒಡವೆಗಳನ್ನ ಮೀನಾಕ್ಷಮ್ಮ ಹಾಗೂ ರತ್ನ ರವರೇ ಕಳುವು ಮಾಡಿದ್ದಾರೆಂದು ಗೋವಿಂದ ಆರೋಪಿಸಿ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *