ಎದುರು ಮನೆ ಆಂಟಿ ಕೈ ಚಳಕ…? 27 ಲಕ್ಷ ನಗದು 300 ಗ್ರಾಂ ಚಿನ್ನಾಭರಣ ಕಳುವು…

ಬನ್ನೂರು,ಜೂ7,Tv10 ಕನ್ನಡ
ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಇಟ್ಟಿದ್ದ 27 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನಾಭರಣ ಕಳುವಾದ ಘಟನೆ ಬನ್ನೂರಿನ ಹೊರಕೇರಿ ವಾರ್ಡ್ ನಲ್ಲಿ ನಡೆದಿದೆ.ಗೋವಿಂದ ಎಂಬುವರ ಮನೆಯ ಬೀರು ಬಾಗಿಲು ಮುರಿದಿರುವ ಚಾಲಾಕಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ.ತಮ್ಮ ಮನೆಗೆ ಹೊಂದಿಕೊಂಡಂತೆ ಮತ್ತೊಂದು ಮನೆಯಲ್ಲಿ ವಾಸ ಮಾಡುತ್ತಿರುವ ತಾಯಿ ಮಗಳು ಕಳ್ಳತನ ಮಾಡಿರುವುದಾಗಿ ಗೋವಿಂದ ರವರು ಆರೋಪಿಸಿ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜೂ 5 ರಂದು ಗೋವಿಂದ ರವರು ತಾವು ಹಾಗೂ ತಮ್ಮ ಸಹೋದರನ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ.ಜೂನ್ 6 ರಂದು ಹಿಂದಿರುಗಿದಾಗ ಮನೆಯಲ್ಲಿದ್ದ ಲಾಕರ್ ಬೀಗ ಮುರಿದಿದ್ದು ಅದರಲ್ಲಿದ್ದ 27 ಲಕ್ಷ ನಗದು ಹಾಗೂ 308 ಗ್ರಾಂ ಒಡವೆಗಳು ನಾಪತ್ತೆಯಾಗಿದೆ.ಅಕ್ಕನ ಮಗನ ಮದುವೆಗೆ ಉಡುಗೊರೆಯಾಗಿ ನಿವೇಶನ ಖರೀದಿಸುವ ಸಲುವಾಗಿ ಗೋವಿಂದ ಹಣವನ್ನ ಹೊಂದಿಸಿ ಇಟ್ಟಿದ್ದರು.ಈ ವಿಚಾರ ಮುಂದಿನ ಮನೆಯಲ್ಲಿದ್ದ ತಾಯಿ ಮಗಳಾದ ಮೀನಾಕ್ಷಮ್ಮ ಹಾಗೂ ರತ್ನ ಇಬ್ಬರಿಗೆ ಮಾತ್ರ ತಿಳಿದಿತ್ತು.ಮನೆಯ ಸದಸ್ಯರಂತೆ ಗೋವಿಂದ ಮನೆಯವರ ಜೊತೆ ಇವರು ಆತ್ಮೀಯವಾಗಿದ್ದರು.ನಗದು ಮತ್ತು ಒಡವೆಗಳನ್ನ ಮೀನಾಕ್ಷಮ್ಮ ಹಾಗೂ ರತ್ನ ರವರೇ ಕಳುವು ಮಾಡಿದ್ದಾರೆಂದು ಗೋವಿಂದ ಆರೋಪಿಸಿ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *