ಎದುರು ಮನೆ ಆಂಟಿ ಕೈ ಚಳಕ…? 27 ಲಕ್ಷ ನಗದು 300 ಗ್ರಾಂ ಚಿನ್ನಾಭರಣ ಕಳುವು…

ಬನ್ನೂರು,ಜೂ7,Tv10 ಕನ್ನಡ
ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಇಟ್ಟಿದ್ದ 27 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನಾಭರಣ ಕಳುವಾದ ಘಟನೆ ಬನ್ನೂರಿನ ಹೊರಕೇರಿ ವಾರ್ಡ್ ನಲ್ಲಿ ನಡೆದಿದೆ.ಗೋವಿಂದ ಎಂಬುವರ ಮನೆಯ ಬೀರು ಬಾಗಿಲು ಮುರಿದಿರುವ ಚಾಲಾಕಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ.ತಮ್ಮ ಮನೆಗೆ ಹೊಂದಿಕೊಂಡಂತೆ ಮತ್ತೊಂದು ಮನೆಯಲ್ಲಿ ವಾಸ ಮಾಡುತ್ತಿರುವ ತಾಯಿ ಮಗಳು ಕಳ್ಳತನ ಮಾಡಿರುವುದಾಗಿ ಗೋವಿಂದ ರವರು ಆರೋಪಿಸಿ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜೂ 5 ರಂದು ಗೋವಿಂದ ರವರು ತಾವು ಹಾಗೂ ತಮ್ಮ ಸಹೋದರನ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ.ಜೂನ್ 6 ರಂದು ಹಿಂದಿರುಗಿದಾಗ ಮನೆಯಲ್ಲಿದ್ದ ಲಾಕರ್ ಬೀಗ ಮುರಿದಿದ್ದು ಅದರಲ್ಲಿದ್ದ 27 ಲಕ್ಷ ನಗದು ಹಾಗೂ 308 ಗ್ರಾಂ ಒಡವೆಗಳು ನಾಪತ್ತೆಯಾಗಿದೆ.ಅಕ್ಕನ ಮಗನ ಮದುವೆಗೆ ಉಡುಗೊರೆಯಾಗಿ ನಿವೇಶನ ಖರೀದಿಸುವ ಸಲುವಾಗಿ ಗೋವಿಂದ ಹಣವನ್ನ ಹೊಂದಿಸಿ ಇಟ್ಟಿದ್ದರು.ಈ ವಿಚಾರ ಮುಂದಿನ ಮನೆಯಲ್ಲಿದ್ದ ತಾಯಿ ಮಗಳಾದ ಮೀನಾಕ್ಷಮ್ಮ ಹಾಗೂ ರತ್ನ ಇಬ್ಬರಿಗೆ ಮಾತ್ರ ತಿಳಿದಿತ್ತು.ಮನೆಯ ಸದಸ್ಯರಂತೆ ಗೋವಿಂದ ಮನೆಯವರ ಜೊತೆ ಇವರು ಆತ್ಮೀಯವಾಗಿದ್ದರು.ನಗದು ಮತ್ತು ಒಡವೆಗಳನ್ನ ಮೀನಾಕ್ಷಮ್ಮ ಹಾಗೂ ರತ್ನ ರವರೇ ಕಳುವು ಮಾಡಿದ್ದಾರೆಂದು ಗೋವಿಂದ ಆರೋಪಿಸಿ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *