ನಾಳೆಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಜಾರಿ…ಮಧ್ಯಾಹ್ನ 1 ಗಂಟಗೆ ಉದ್ಘಾಟನೆ…ಸಿಎಂ ಸಿದ್ದರಾಮಯ್ಯ…

ಮೈಸೂರು,ಜೂ10,Tv10 ಕನ್ನಡ
ನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣ ಆರಂಭವಾಗಲಿದೆ.
ರಾಜ್ಯದ ಒಳಗೆ ಮಾತ್ರ, ಬೇರೆ ರಾಜ್ಯಗಳಿಗೆ ಹೋದ್ರೆ ಇಲ್ಲ.ಹೊರ ರಾಜ್ಯಕ್ಕೆ ಹೋಗುವವರು ರಾಜ್ಯದ ಗಡಿ ವರೆಗೆ ಹೋಗಿ ನಂತರ ಟಿಕೇಟ್ ತಗೋಬೇಕು.
ನಾಳೆ ಮಧ್ಯಾಹ್ನ 1 ಗಂಟೆಯಿಂದ‌ ಯೋಜನೆ ಚಾಲು ಆಗುತ್ತೆ.ವಿಧಾನಸೌದದ ಬಳಿ ನಾನು, ಡಿಸಿಎಂ ಹಾಗೂ ಸಾರಿಗೆ ಮಂತ್ರಿ ಜಾರಿ ಮಾಡುತ್ತೇವೆ.
ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಏಕಕಲಾದಲ್ಲಿ ಜಾರಿಯಾಗಲಿದೆ ಎಂದು ತಿಳಿಸಿದರು.
ವರುಣ ತಾಲೂಕು ಕೇಂದ್ರ ಬೇಡಿಕೆ ವಿಚಾರ.
ಜನ ವರುಣ ತಾಲೂಕು ಮಾಡಿ ಅಂತ ಕೇಳಿಲ್ಲ.
ಬಿಜೆಪಿ ಬಸವರಾಜ ಬೊಮ್ಮಾಯಿ ಹೇಳಿದ್ದು.
ನಾನು ಮೂರು ದಿನ ಪ್ರಚಾರದಲ್ಲಿ ಎಲ್ಲೂ ಜನ ಕೇಳಿಲ್ಲ.
ಬಸವರಾಜ ಬೊಮ್ಮಾಯಿ ಹೇಳಿದ್ರೆ ಮಾಡಲ್ಲ.
ಜನ ಕೇಳಿದ್ರೆ ಬೇಕಾದ್ರೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಜುಲೈ 1 ರಿಂದ ಗುಲ್ಬರ್ಗದಲ್ಲಿ ಗೃಹಜ್ಯೋತಿ ಲಾಂಚ್ ಆಗುತ್ತೆ.
ಜುಲೈ 1 ರಂದೇ ಹತ್ತು ಕೆಜಿ ಆಹಾರ ಧಾನ್ಯ ಕೊಡುವ ಜೋಜನೆ ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತದೆ.
ಜುಲೈ 16 ರಿಂದ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಆಗುತ್ತೆ.
2022-23ರಲ್ಲಿ ಪಾಸ್ ಆದ ಪದವಿ, ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳು 24 ತಿಂಗಳಲ್ಲಿ ಕೆಲಸ ಸಿಗದಿದ್ದರೆ ಹಣ.
ಮಧ್ಯೆ ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕರೆ ಅವರಿಗೆ ಹಣ ಇಲ್ಲ ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ
ಸರ್ಕಾರದ ತಲೆನೋವು ನಿಮಗ್ಯಾಕೆ ಎಂದು ಪ್ರಶ್ನಿಸಿದರು.
ನಾವು ಹೇಳಿದಂತೆ ಯೋಜನೆ ಜಾರಿ ಮಾಡುತ್ತೇವೆ.
ವಿದ್ಯುತ್ ದರವನ್ನ ಪ್ರತಿ ವರ್ಷ ರೆಗ್ಯುಲೇಟರಿ ಕಮಿಷನ್ ದರ ಪರಿಷ್ಕರಣೆ ಮಾಡುತ್ತೆ.
ಜೂನ್ 1 ರಿಂದ ಜಾರಿ ಮಾಡುತ್ತಾರೆ.ನಾವು ಅಧಿಕಾರಕ್ಕೆ ಬರುವ ಮುಂಚಿತವಾಗಿ ವಿದ್ಯುತ್ ದರ ಪರಿಷ್ಕರಣೆ ಆಗಿದೆ ಎಂದು ಸ್ಪಷ್ಟಪಡಿಸಿದರು
ನಾನು ಏನ್ ಹೇಳಿದ್ದೇವೆ ಅದನ್ನೇ ಮಾಡುತ್ತೇವೆ.
ಬಿಜೆಪಿಯವರಂತೆ ಸುಳ್ಳು ಹೇಳುವುದಿಲ್ಲ.
ನಾನು ಅಧಿಕಾರ ಇರಲಿ, ಇಲ್ಲದಿರಲಿ ಒಂದೇ ರೀತಿ ಇರುತ್ತೇನೆ ಎಂದರು…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *